<p><strong>ಪುಣೆ:</strong> ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ನಾಲ್ಕರ ಘಟ್ಟದ ಕನಸು ಉಳಿಯಬೇಕಾದರೆ ಗೆಲ್ಲಲೇಬೇಕಿರುವ ಬಾಂಗ್ಲಾದೇಶ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.</p><p>ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ (ಎಂ.ಸಿ.ಎ) ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಂದ್ಯ ನಡೆಯುತ್ತಿದೆ.</p><p>ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಂ ಇಂಡಿಯಾ, ಜಯದ ಓಟ ಮುಂದುವರಿಸುವ ತವಕದಲ್ಲಿದೆ.</p><p>ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಕಳೆದರೆಡು ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ. ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಶುಭಮನ್ ಗಿಲ್ ರೋಹಿತ್ಗೆ ಸಾಥ್ ನೀಡಲಿದ್ದಾರೆ. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಕೆ.ಎಲ್. ರಾಹುಲ್ ಅವರು ಮಧ್ಯಮ ಕ್ರಮಾಂಕದ ಶಕ್ತಿಯಾಗಿದ್ದಾರೆ.</p><p>ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜ ಅವರನ್ನೊಳಗೊಂಡ ಬೌಲಿಂಗ್ ವಿಭಾಗವೂ ಬಲಿಷ್ಠವಾಗಿದೆ. ಹಾಗಾಗಿ ಬಾಂಗ್ಲಾ ಪಡೆಗೆ ಈ ಪಂದ್ಯದಲ್ಲಿ ಹೇಗೆ ಆಡಲಿದೆ ಎಂಬುದನ್ನು ಕಾದುನೋಡಬೇಕಿದೆ.</p>.<p><strong>ಶಕೀಬ್ ಅಲಭ್ಯ<br></strong>ಅನುಭವಿ ಆಟಗಾರ, ನಾಯಕ ಶಕೀಬ್ ಅಲ್ ಹಸನ್ ಗಾಯಗೊಂಡಿದ್ದು, ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇದರಿಂದಾಗಿ ಬಾಂಗ್ಲಾ ಪಡೆಗೆ ಸಮರ್ಥ ಆಲ್ರೌಂಡರ್ ಕೊರತೆ ಕಾಡುವ ಸಾಧ್ಯತೆ ಇದೆ. </p><p>ಶಕೀಬ್ ಬದಲು ನಸುಮ್ ಅಹಮದ್ಗೆ ಸ್ಥಾನ ನೀಡಲಾಗಿದೆ. ನಜ್ಮುಲ್ ಹೊಸೇನ್ ಶಾಂತೊ ತಂಡ ಮುನ್ನಡೆಸಲಿದ್ದಾರೆ.</p><p><strong>ಆಡುವ ಹನ್ನೊಂದರ ಬಳಗ<br>ಭಾರತ</strong>: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ವಿಕೆಟ್ಕೀಪರ್), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್,</p><p><strong>ಬಾಂಗ್ಲಾದೇಶ</strong>: ಲಿಟನ್ ದಾಸ್, ತಂಜೀಂ ಹಸನ್, ನಜ್ಮುಲ್ ಹೊಸೇನ್ ಶಾಂತೊ, ಮೆಹದಿ ಹಸನ್ ಮಿರಾಜ್, ತೌಹಿದ್ ಹೃದಯ್, ಮುಷ್ಫಿಕುರ್ ರಹೀಮ್, ಮೆಹಮುದುಲ್ಲಾ, ನಸುಮ್ ಅಹಮದ್, ಹಸನ್ ಮೆಹಮೂದ್, ಮುಸ್ತಫಿಜುರ್ ರೆಹಮಾನ್, ಶೊರಿಫುಲ್ ಇಸ್ಲಾಂ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ನಾಲ್ಕರ ಘಟ್ಟದ ಕನಸು ಉಳಿಯಬೇಕಾದರೆ ಗೆಲ್ಲಲೇಬೇಕಿರುವ ಬಾಂಗ್ಲಾದೇಶ ತಂಡ ಭಾರತದ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.</p><p>ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ (ಎಂ.ಸಿ.ಎ) ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಂದ್ಯ ನಡೆಯುತ್ತಿದೆ.</p><p>ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಂ ಇಂಡಿಯಾ, ಜಯದ ಓಟ ಮುಂದುವರಿಸುವ ತವಕದಲ್ಲಿದೆ.</p><p>ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಕಳೆದರೆಡು ಪಂದ್ಯಗಳಲ್ಲಿ ಅಬ್ಬರಿಸಿದ್ದಾರೆ. ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಶುಭಮನ್ ಗಿಲ್ ರೋಹಿತ್ಗೆ ಸಾಥ್ ನೀಡಲಿದ್ದಾರೆ. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಕೆ.ಎಲ್. ರಾಹುಲ್ ಅವರು ಮಧ್ಯಮ ಕ್ರಮಾಂಕದ ಶಕ್ತಿಯಾಗಿದ್ದಾರೆ.</p><p>ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜ ಅವರನ್ನೊಳಗೊಂಡ ಬೌಲಿಂಗ್ ವಿಭಾಗವೂ ಬಲಿಷ್ಠವಾಗಿದೆ. ಹಾಗಾಗಿ ಬಾಂಗ್ಲಾ ಪಡೆಗೆ ಈ ಪಂದ್ಯದಲ್ಲಿ ಹೇಗೆ ಆಡಲಿದೆ ಎಂಬುದನ್ನು ಕಾದುನೋಡಬೇಕಿದೆ.</p>.<p><strong>ಶಕೀಬ್ ಅಲಭ್ಯ<br></strong>ಅನುಭವಿ ಆಟಗಾರ, ನಾಯಕ ಶಕೀಬ್ ಅಲ್ ಹಸನ್ ಗಾಯಗೊಂಡಿದ್ದು, ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇದರಿಂದಾಗಿ ಬಾಂಗ್ಲಾ ಪಡೆಗೆ ಸಮರ್ಥ ಆಲ್ರೌಂಡರ್ ಕೊರತೆ ಕಾಡುವ ಸಾಧ್ಯತೆ ಇದೆ. </p><p>ಶಕೀಬ್ ಬದಲು ನಸುಮ್ ಅಹಮದ್ಗೆ ಸ್ಥಾನ ನೀಡಲಾಗಿದೆ. ನಜ್ಮುಲ್ ಹೊಸೇನ್ ಶಾಂತೊ ತಂಡ ಮುನ್ನಡೆಸಲಿದ್ದಾರೆ.</p><p><strong>ಆಡುವ ಹನ್ನೊಂದರ ಬಳಗ<br>ಭಾರತ</strong>: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ವಿಕೆಟ್ಕೀಪರ್), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್,</p><p><strong>ಬಾಂಗ್ಲಾದೇಶ</strong>: ಲಿಟನ್ ದಾಸ್, ತಂಜೀಂ ಹಸನ್, ನಜ್ಮುಲ್ ಹೊಸೇನ್ ಶಾಂತೊ, ಮೆಹದಿ ಹಸನ್ ಮಿರಾಜ್, ತೌಹಿದ್ ಹೃದಯ್, ಮುಷ್ಫಿಕುರ್ ರಹೀಮ್, ಮೆಹಮುದುಲ್ಲಾ, ನಸುಮ್ ಅಹಮದ್, ಹಸನ್ ಮೆಹಮೂದ್, ಮುಸ್ತಫಿಜುರ್ ರೆಹಮಾನ್, ಶೊರಿಫುಲ್ ಇಸ್ಲಾಂ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>