<p><strong>ಅಹಮದಾಬಾದ್</strong>: ‘ಭಾರತದ ಕ್ರಿಕೆಟ್ ಅಭಿಮಾನಿಗಳನ್ನು ಮೌನಕ್ಕೆ ತಳ್ಳಲು ನಮ್ಮ ಆಟಗಾರರು ಹಿಂಜರಿಯುವುದಿಲ್ಲ’ ಎಂದು ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟನರ್ ಹೇಳಿದರು. ಆ ಮೂಲಕ ಭಾರತ ತಂಡವನ್ನು ಸೋಲಿಸುವುದಾಗಿ ಸವಾಲೊಡ್ಡಿದರು. </p>.<p>ಟಿ20 ವಿಶ್ವಕಪ್ ಇತಿಹಾಸದಲ್ಲಿ ಕಿವೀಸ್ ಬಳಗವು ಐದು ಬಾರಿ ಸೆಮಿಫೈನಲ್ ಪ್ರವೇಶಿಸಿತ್ತು. ಒಂದು ಸಲ ಫೈನಲ್ ಪ್ರವೇಶಿಸಿ ಆಸ್ಟ್ರೇಲಿಯಾ ಎದುರು ದುಬೈನಲ್ಲಿ ಸೋತಿತ್ತು. ಇದೀಗ ಮತ್ತೊಮ್ಮೆ ಪ್ರಶಸ್ತಿ ಸುತ್ತು ಪ್ರವೇಶಿಸಿದೆ. </p>.<p>‘ನಾವು ತಂಡವಾಗಿ ಆಡುತ್ತೇವೆ. ಟ್ರೋಫಿ ಗೆಲ್ಲುವುದು ನಮ್ಮ ಗುರಿ. ನಾವು ಫೆವರಿಟ್ ತಂಡ ಅಲ್ಲ ಎಂಬುದರ ಅರಿವು ಇದೆ. ಆದರೆ ಪೂರ್ಣಪ್ರಮಾಣದಲ್ಲಿ ಹೋರಾಟ ಮಾಡುತ್ತೇವೆ. ಕೇವಲ ಇಲ್ಲಿಯ ವಾತಾವರಣ ಮತ್ತು ಪರಿಸ್ಥಿತಿಗೆ ಅನುಗುಣವಾಗಿ ಶರಣಾಗುವುದಿಲ್ಲ’ ಎಂದರು. </p>.T20 WC Final: ಭಾರತ–ನ್ಯೂಜಿಲೆಂಡ್ ಹಣಾಹಣಿ: ಸಾಬರಮತಿ ತಟದಲ್ಲಿ ಸಾಮ್ರಾಟ ಯಾರು?.<p>2023ರಲ್ಲಿ ಇದೇ ಮೈದಾನದಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದವು. ಆಗ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಅವರು ‘ಮೈದಾನದ ಪ್ರೇಕ್ಷಕರ ಗ್ಯಾಲರಿಯನ್ನು ಸ್ತಬ್ಧಗೊಳಿಸುತ್ತೇವೆ’ ಎಂದಿದ್ದರು. ಈಚೆಗೆ ಮುಂಬೈನಲ್ಲಿ ನಡೆದಿದ್ದ ಸೆಮಿಫೈನಲ್ ಮುನ್ನಾ ದಿನವೂ ಇಂಗ್ಲೆಂಡ್ ತಂಡದ ಸ್ಯಾಮ್ ಕರನ್ ಕೂಡ ಇದೇ ಮಾತು ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ‘ಭಾರತದ ಕ್ರಿಕೆಟ್ ಅಭಿಮಾನಿಗಳನ್ನು ಮೌನಕ್ಕೆ ತಳ್ಳಲು ನಮ್ಮ ಆಟಗಾರರು ಹಿಂಜರಿಯುವುದಿಲ್ಲ’ ಎಂದು ನ್ಯೂಜಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟನರ್ ಹೇಳಿದರು. ಆ ಮೂಲಕ ಭಾರತ ತಂಡವನ್ನು ಸೋಲಿಸುವುದಾಗಿ ಸವಾಲೊಡ್ಡಿದರು. </p>.<p>ಟಿ20 ವಿಶ್ವಕಪ್ ಇತಿಹಾಸದಲ್ಲಿ ಕಿವೀಸ್ ಬಳಗವು ಐದು ಬಾರಿ ಸೆಮಿಫೈನಲ್ ಪ್ರವೇಶಿಸಿತ್ತು. ಒಂದು ಸಲ ಫೈನಲ್ ಪ್ರವೇಶಿಸಿ ಆಸ್ಟ್ರೇಲಿಯಾ ಎದುರು ದುಬೈನಲ್ಲಿ ಸೋತಿತ್ತು. ಇದೀಗ ಮತ್ತೊಮ್ಮೆ ಪ್ರಶಸ್ತಿ ಸುತ್ತು ಪ್ರವೇಶಿಸಿದೆ. </p>.<p>‘ನಾವು ತಂಡವಾಗಿ ಆಡುತ್ತೇವೆ. ಟ್ರೋಫಿ ಗೆಲ್ಲುವುದು ನಮ್ಮ ಗುರಿ. ನಾವು ಫೆವರಿಟ್ ತಂಡ ಅಲ್ಲ ಎಂಬುದರ ಅರಿವು ಇದೆ. ಆದರೆ ಪೂರ್ಣಪ್ರಮಾಣದಲ್ಲಿ ಹೋರಾಟ ಮಾಡುತ್ತೇವೆ. ಕೇವಲ ಇಲ್ಲಿಯ ವಾತಾವರಣ ಮತ್ತು ಪರಿಸ್ಥಿತಿಗೆ ಅನುಗುಣವಾಗಿ ಶರಣಾಗುವುದಿಲ್ಲ’ ಎಂದರು. </p>.T20 WC Final: ಭಾರತ–ನ್ಯೂಜಿಲೆಂಡ್ ಹಣಾಹಣಿ: ಸಾಬರಮತಿ ತಟದಲ್ಲಿ ಸಾಮ್ರಾಟ ಯಾರು?.<p>2023ರಲ್ಲಿ ಇದೇ ಮೈದಾನದಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದವು. ಆಗ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಅವರು ‘ಮೈದಾನದ ಪ್ರೇಕ್ಷಕರ ಗ್ಯಾಲರಿಯನ್ನು ಸ್ತಬ್ಧಗೊಳಿಸುತ್ತೇವೆ’ ಎಂದಿದ್ದರು. ಈಚೆಗೆ ಮುಂಬೈನಲ್ಲಿ ನಡೆದಿದ್ದ ಸೆಮಿಫೈನಲ್ ಮುನ್ನಾ ದಿನವೂ ಇಂಗ್ಲೆಂಡ್ ತಂಡದ ಸ್ಯಾಮ್ ಕರನ್ ಕೂಡ ಇದೇ ಮಾತು ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>