<p>ಬೆಂಗಳೂರು: ಏಕಲವ್ಯ ಪ್ರಶಸ್ತಿಗಾಗಿ ರೋಷನ್ ಫರಾರೋ (ಬಾಡಿ ಬಿಲ್ಡಿಂಗ್), ಎಸ್.ನವೀನ್ (ಕರಾಟೆ) ಹಾಗೂ ಪಿ.ಸೋಮಶೇಖರ್ (ಅಂಗವಿಕಲ ಕ್ರೀಡಾಪಟು) ನೀಡಿದ್ದ ದಾಖಲೆಗಳನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಮಂಗಳವಾರ ಪರಿಶೀಲನೆ ನಡೆಸಲಿದೆ.<br /> <br /> ಇಲಾಖೆಯು ಮೊದಲು ಪ್ರಕಟಿಸಿದ ಪ್ರಶಸ್ತಿ ಪಟ್ಟಿಯಲ್ಲಿದ್ದ ಈ ಮೂರು ಮಂದಿ ಕ್ರೀಡಾಪಟುಗಳು ಸಲ್ಲಿಸಿರುವ ದಾಖಲೆಗಳು ಅನುಮಾನಕ್ಕೆ ಕಾರಣವಾಗಿದ್ದರಿಂದ ತಡೆಹಿಡಿಯಲಾಗಿತ್ತು. ಹಾಗಾಗಿ ಆಗಸ್ಟ್ 29ರಂದ ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ 12 ಮಂದಿಗೆ ಮಾತ್ರ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. <br /> <br /> `ಮಂಗಳವಾರ ನಾವು ಈ ಕ್ರೀಡಾಪಟುಗಳ ದಾಖಲೆಗಳನ್ನು ಪರಿಶೀಲಿಸಲಿದ್ದೇವೆ. ಈ ಮೂರು ಮಂದಿ ಕ್ರೀಡಾಪಟುಗಳಿಗೆ ಹಾಜರಾಗಲು ನಾವು ಸೂಚಿಸಿದ್ದೇವೆ. ದಾಖಲೆ ಪರಿಶೀಲಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್.ಪೆರುಮಾಳ್ ಅವರಿಗೆ ವರದಿ ನೀಡಲಿದ್ದೇವೆ~ ಎಂದು ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ವೈ.ಆರ್.ಕಾಂತರಾಜ್ `ಪ್ರಜಾವಾಣಿ~ಗೆ ತಿಳಿಸಿದ್ದಾರೆ. <br /> <br /> `ಆಕಸ್ಮಾತ್ ರೋಷನ್, ನವೀನ್ ಹಾಗೂ ಸೋಮಶೇಖರ್ ಅವರು ಪ್ರಶಸ್ತಿ ಪಡೆಯಲು ನೀಡಿರುವ ದಾಖಲೆಗಳಲ್ಲಿ ದೋಷ ಇರುವುದು ಧೃಡಪಟ್ಟರೆ ಅವರ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು~ ಎಂದು ಪೆರುಮಾಳ್ ಎಚ್ಚರಿಕೆ ಕೂಡ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಏಕಲವ್ಯ ಪ್ರಶಸ್ತಿಗಾಗಿ ರೋಷನ್ ಫರಾರೋ (ಬಾಡಿ ಬಿಲ್ಡಿಂಗ್), ಎಸ್.ನವೀನ್ (ಕರಾಟೆ) ಹಾಗೂ ಪಿ.ಸೋಮಶೇಖರ್ (ಅಂಗವಿಕಲ ಕ್ರೀಡಾಪಟು) ನೀಡಿದ್ದ ದಾಖಲೆಗಳನ್ನು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಮಂಗಳವಾರ ಪರಿಶೀಲನೆ ನಡೆಸಲಿದೆ.<br /> <br /> ಇಲಾಖೆಯು ಮೊದಲು ಪ್ರಕಟಿಸಿದ ಪ್ರಶಸ್ತಿ ಪಟ್ಟಿಯಲ್ಲಿದ್ದ ಈ ಮೂರು ಮಂದಿ ಕ್ರೀಡಾಪಟುಗಳು ಸಲ್ಲಿಸಿರುವ ದಾಖಲೆಗಳು ಅನುಮಾನಕ್ಕೆ ಕಾರಣವಾಗಿದ್ದರಿಂದ ತಡೆಹಿಡಿಯಲಾಗಿತ್ತು. ಹಾಗಾಗಿ ಆಗಸ್ಟ್ 29ರಂದ ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ 12 ಮಂದಿಗೆ ಮಾತ್ರ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. <br /> <br /> `ಮಂಗಳವಾರ ನಾವು ಈ ಕ್ರೀಡಾಪಟುಗಳ ದಾಖಲೆಗಳನ್ನು ಪರಿಶೀಲಿಸಲಿದ್ದೇವೆ. ಈ ಮೂರು ಮಂದಿ ಕ್ರೀಡಾಪಟುಗಳಿಗೆ ಹಾಜರಾಗಲು ನಾವು ಸೂಚಿಸಿದ್ದೇವೆ. ದಾಖಲೆ ಪರಿಶೀಲಿಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್.ಪೆರುಮಾಳ್ ಅವರಿಗೆ ವರದಿ ನೀಡಲಿದ್ದೇವೆ~ ಎಂದು ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ವೈ.ಆರ್.ಕಾಂತರಾಜ್ `ಪ್ರಜಾವಾಣಿ~ಗೆ ತಿಳಿಸಿದ್ದಾರೆ. <br /> <br /> `ಆಕಸ್ಮಾತ್ ರೋಷನ್, ನವೀನ್ ಹಾಗೂ ಸೋಮಶೇಖರ್ ಅವರು ಪ್ರಶಸ್ತಿ ಪಡೆಯಲು ನೀಡಿರುವ ದಾಖಲೆಗಳಲ್ಲಿ ದೋಷ ಇರುವುದು ಧೃಡಪಟ್ಟರೆ ಅವರ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು~ ಎಂದು ಪೆರುಮಾಳ್ ಎಚ್ಚರಿಕೆ ಕೂಡ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>