<p>ಬೆಂಗಳೂರು: ಏಕಲವ್ಯ ಪ್ರಶಸ್ತಿಗಾಗಿ ರೋಷನ್ ಫರಾರೋ (ಬಾಡಿ ಬಿಲ್ಡಿಂಗ್), ಎಸ್.ನವೀನ್ (ಕರಾಟೆ) ಹಾಗೂ ಪಿ.ಸೋಮಶೇಖರ್ (ಅಂಗವಿಕಲ ಕ್ರೀಡಾಪಟು) ಸಲ್ಲಿಸಿದ್ದ ದಾಖಲೆಗಳ ವಿವಾದ ಸಂಬಂಧ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಪರಿಶೀಲನಾ ಸಮಿತಿ ಸೋಮವಾರ ಸಭೆ ಸೇರಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. <br /> <br /> ಈ ವಿಷಯವನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್.ಪೆರುಮಾಳ್ `ಪ್ರಜಾವಾಣಿ~ಗೆ ತಿಳಿಸಿದರು.<br /> `ಈಗಾಗಲೇ ಈ ಕ್ರೀಡಾಪಟುಗಳನ್ನು ಕ್ರೀಡಾ ಇಲಾಖೆಯ ಇಬ್ಬರು ಸದಸ್ಯರ ಸಮಿತಿ ವಿಚಾರಣೆಗೆ ಒಳಪಡಿಸಿ ದಾಖಲೆ ಪರಿಶೀಲಿಸಿದೆ. ಈ ಮೂರೂ ಮಂದಿ ಜಂಟಿ ನಿರ್ದೇಶಕ ಹಾಗೂ ಉಪ ಕಾರ್ಯದರ್ಶಿ ಸಾರಥ್ಯದ ಸಮಿತಿ ಮುಂದೆ ಮಂಗಳವಾರ ಹಾಜರಾಗಿದ್ದರು. ಈ ಸಂಬಂಧದ ಸ್ವತಂತ್ರ ವರದಿಯನ್ನು ಪರಿಶೀಲನಾ ಸಮಿತಿಗೆ ಸಲ್ಲಿಸಲಿದ್ದಾರೆ. ಸೋಮವಾರ ಈ ಸಮಿತಿ ಸಭೆ ಸೇರಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ~ ಎಂದು ಅವರು ಹೇಳಿದರು.<br /> <br /> `ಪರಿಶೀಲನಾ ಸಮಿತಿಯಲ್ಲಿ ಆರು ಮಂದಿ ಇದ್ದಾರೆ. ಅಗತ್ಯಬಿದ್ದರೆ ಈ ಸಭೆಗೆ ಜಂಟಿ ನಿರ್ದೇಶಕ ಹಾಗೂ ಉಪ ಕಾರ್ಯದರ್ಶಿಯನ್ನು ಆಹ್ವಾನಿಸಿ ಹೆಚ್ಚಿನ ಮಾಹಿತಿ ಪಡೆಯಲಾಗುವುದು~ ಎಂದು ಪೆರುಮಾಳ್ ನುಡಿದರು. <br /> <br /> ಇಲಾಖೆಯು ಮೊದಲು ಪ್ರಕಟಿಸಿದ ಪ್ರಶಸ್ತಿ ಪಟ್ಟಿಯಲ್ಲಿದ್ದ ಈ ಮೂರು ಮಂದಿ ಕ್ರೀಡಾಪಟುಗಳು ಸಲ್ಲಿಸಿರುವ ದಾಖಲೆಗಳು ಅನುಮಾನಕ್ಕೆ ಕಾರಣವಾಗಿದ್ದರಿಂದ ತಡೆಹಿಡಿಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಏಕಲವ್ಯ ಪ್ರಶಸ್ತಿಗಾಗಿ ರೋಷನ್ ಫರಾರೋ (ಬಾಡಿ ಬಿಲ್ಡಿಂಗ್), ಎಸ್.ನವೀನ್ (ಕರಾಟೆ) ಹಾಗೂ ಪಿ.ಸೋಮಶೇಖರ್ (ಅಂಗವಿಕಲ ಕ್ರೀಡಾಪಟು) ಸಲ್ಲಿಸಿದ್ದ ದಾಖಲೆಗಳ ವಿವಾದ ಸಂಬಂಧ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಪರಿಶೀಲನಾ ಸಮಿತಿ ಸೋಮವಾರ ಸಭೆ ಸೇರಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. <br /> <br /> ಈ ವಿಷಯವನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್.ಪೆರುಮಾಳ್ `ಪ್ರಜಾವಾಣಿ~ಗೆ ತಿಳಿಸಿದರು.<br /> `ಈಗಾಗಲೇ ಈ ಕ್ರೀಡಾಪಟುಗಳನ್ನು ಕ್ರೀಡಾ ಇಲಾಖೆಯ ಇಬ್ಬರು ಸದಸ್ಯರ ಸಮಿತಿ ವಿಚಾರಣೆಗೆ ಒಳಪಡಿಸಿ ದಾಖಲೆ ಪರಿಶೀಲಿಸಿದೆ. ಈ ಮೂರೂ ಮಂದಿ ಜಂಟಿ ನಿರ್ದೇಶಕ ಹಾಗೂ ಉಪ ಕಾರ್ಯದರ್ಶಿ ಸಾರಥ್ಯದ ಸಮಿತಿ ಮುಂದೆ ಮಂಗಳವಾರ ಹಾಜರಾಗಿದ್ದರು. ಈ ಸಂಬಂಧದ ಸ್ವತಂತ್ರ ವರದಿಯನ್ನು ಪರಿಶೀಲನಾ ಸಮಿತಿಗೆ ಸಲ್ಲಿಸಲಿದ್ದಾರೆ. ಸೋಮವಾರ ಈ ಸಮಿತಿ ಸಭೆ ಸೇರಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ~ ಎಂದು ಅವರು ಹೇಳಿದರು.<br /> <br /> `ಪರಿಶೀಲನಾ ಸಮಿತಿಯಲ್ಲಿ ಆರು ಮಂದಿ ಇದ್ದಾರೆ. ಅಗತ್ಯಬಿದ್ದರೆ ಈ ಸಭೆಗೆ ಜಂಟಿ ನಿರ್ದೇಶಕ ಹಾಗೂ ಉಪ ಕಾರ್ಯದರ್ಶಿಯನ್ನು ಆಹ್ವಾನಿಸಿ ಹೆಚ್ಚಿನ ಮಾಹಿತಿ ಪಡೆಯಲಾಗುವುದು~ ಎಂದು ಪೆರುಮಾಳ್ ನುಡಿದರು. <br /> <br /> ಇಲಾಖೆಯು ಮೊದಲು ಪ್ರಕಟಿಸಿದ ಪ್ರಶಸ್ತಿ ಪಟ್ಟಿಯಲ್ಲಿದ್ದ ಈ ಮೂರು ಮಂದಿ ಕ್ರೀಡಾಪಟುಗಳು ಸಲ್ಲಿಸಿರುವ ದಾಖಲೆಗಳು ಅನುಮಾನಕ್ಕೆ ಕಾರಣವಾಗಿದ್ದರಿಂದ ತಡೆಹಿಡಿಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>