<p><strong>ದಾವಣಗೆರೆ:</strong> ವಿಜಯಾ ಬ್ಯಾಂಕ್, ಕೆಎಸ್ಪಿ, ಆರ್ಡಬ್ಲುಎಫ್ ತಂಡಗಳು ದ್ರೋಣ ಕ್ರೀಡಾ ಸಮಿತಿ ವತಿಯಿಂದ ನಗರದ ನಾಟ್ಯಾಚಾರ್ಯ ಕುಲಕರ್ಣಿ ರಂಗಮಂದಿರದ ಆವರಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಕಬಡ್ಡಿ ಟೂರ್ನಿಯ ಎರಡನೇ ದಿನವಾದ ಶನಿವಾರ ಸೆಮಿಫೈನಲ್ ಹಂತ ತಲುಪಿವೆ.</p>.<p>ಬೆಂಗಳೂರಿನ ಹೂಡಿ ಮತ್ತು ವಿಜಯಾ ಬ್ಯಾಂಕ್ ತಂಡಗಳ ನಡುವೆ ನಡೆದ ಕ್ವಾರ್ಟರ್ ಫೈನಲ್ ಪಂದ್ಯದ ಮೊದಲ ಅರ್ಧದಲ್ಲಿ 11-0 ಅಂಕಗಳಿಂದ ಮುಂದಿದ್ದ ವಿಜಯಾ ಬ್ಯಾಂಕ್, ಅಂತಿಮವಾಗಿ 23-4 ಅಂತರದಿಂದ ಗೆಲುವು ಸಾಧಿಸಿತು.</p>.<p>ಮತ್ತೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, ಕೆಎಸ್ಪಿ ಮತ್ತು ಬಿಇಎಲ್ ನಡುವೆ ನಡೆದ ಸೆಣಸಾಟದ ಮೊದಲ ಅರ್ಧದಲ್ಲಿ 28-6 ಅಂಕಗಳಿಂದ ಕೆಎಸ್ಪಿ ತಂಡ ಮುಂದಿತ್ತು. ಅಂತಿಮವಾಗಿ ಅದು 40-15 ಅಂತರದಿಂದ ವಿಜಯ ಸಾಧಿಸಿತು.</p>.<p>ಆರ್ಡಬ್ಲುಎಫ್ ಇನ್ನೊಂದು ಕ್ವಾರ್ಟರ್ ಫೈನಲ್ನಲ್ಲಿ 37-11 ರಲ್ಲಿ ಬಿಸಿಪಿ ವಿರುದ್ಧ ಜಯ ಸಾಧಿಸಿತು. ವಿರಾಮದ ವೇಳೆಗೆ ವಿಜಯಿ ತಂಡ 15-7 ಅಂಕಗಳಿಂದ ಮುನ್ನಡೆ ಕಾಯ್ದುಕೊಂಡಿತ್ತು. ಅ. 23ರಂದು ಸಂಜೆ 5ರಿಂದ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ವಿಜಯಾ ಬ್ಯಾಂಕ್, ಕೆಎಸ್ಪಿ, ಆರ್ಡಬ್ಲುಎಫ್ ತಂಡಗಳು ದ್ರೋಣ ಕ್ರೀಡಾ ಸಮಿತಿ ವತಿಯಿಂದ ನಗರದ ನಾಟ್ಯಾಚಾರ್ಯ ಕುಲಕರ್ಣಿ ರಂಗಮಂದಿರದ ಆವರಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಕಬಡ್ಡಿ ಟೂರ್ನಿಯ ಎರಡನೇ ದಿನವಾದ ಶನಿವಾರ ಸೆಮಿಫೈನಲ್ ಹಂತ ತಲುಪಿವೆ.</p>.<p>ಬೆಂಗಳೂರಿನ ಹೂಡಿ ಮತ್ತು ವಿಜಯಾ ಬ್ಯಾಂಕ್ ತಂಡಗಳ ನಡುವೆ ನಡೆದ ಕ್ವಾರ್ಟರ್ ಫೈನಲ್ ಪಂದ್ಯದ ಮೊದಲ ಅರ್ಧದಲ್ಲಿ 11-0 ಅಂಕಗಳಿಂದ ಮುಂದಿದ್ದ ವಿಜಯಾ ಬ್ಯಾಂಕ್, ಅಂತಿಮವಾಗಿ 23-4 ಅಂತರದಿಂದ ಗೆಲುವು ಸಾಧಿಸಿತು.</p>.<p>ಮತ್ತೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, ಕೆಎಸ್ಪಿ ಮತ್ತು ಬಿಇಎಲ್ ನಡುವೆ ನಡೆದ ಸೆಣಸಾಟದ ಮೊದಲ ಅರ್ಧದಲ್ಲಿ 28-6 ಅಂಕಗಳಿಂದ ಕೆಎಸ್ಪಿ ತಂಡ ಮುಂದಿತ್ತು. ಅಂತಿಮವಾಗಿ ಅದು 40-15 ಅಂತರದಿಂದ ವಿಜಯ ಸಾಧಿಸಿತು.</p>.<p>ಆರ್ಡಬ್ಲುಎಫ್ ಇನ್ನೊಂದು ಕ್ವಾರ್ಟರ್ ಫೈನಲ್ನಲ್ಲಿ 37-11 ರಲ್ಲಿ ಬಿಸಿಪಿ ವಿರುದ್ಧ ಜಯ ಸಾಧಿಸಿತು. ವಿರಾಮದ ವೇಳೆಗೆ ವಿಜಯಿ ತಂಡ 15-7 ಅಂಕಗಳಿಂದ ಮುನ್ನಡೆ ಕಾಯ್ದುಕೊಂಡಿತ್ತು. ಅ. 23ರಂದು ಸಂಜೆ 5ರಿಂದ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>