<p><strong>ಗೋಲ್ಡ್ಕೋಸ್ಟ್:</strong> ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕನ್ನಡಿಗ <a href="http://www.prajavani.net/news/article/2018/03/26/561755.html" target="_blank">ಗುರುರಾಜ್</a> ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಇದರೊಂದಿಗೆ ಭಾರತ ಮೊದಲ ಪದಕ ಗೆದ್ದಂತಾಗಿದೆ.</p>.<p>ಪುರುಷರ ವಿಭಾಗದ 56 ಕೆ.ಜಿ. ವೇಟ್ಲಿಫ್ಟಿಂಗ್ನಲ್ಲಿ ಗುರುರಾಜ್ ಒಟ್ಟು 249 ಕೆ.ಜಿ. ಭಾರ ಎತ್ತುವ ಮೂಲಕ ಈ ಸಾಧನೆ ಮಾಡಿದ್ದಾರೆ. ಮೊದಲಿಗೆ 111 ಕೆ.ಜಿ. ಭಾರ ಎತ್ತಿದ ಅವರು ನಂತರ 138 ಕೆ.ಜಿ. ಭಾರ ಎತ್ತಿದ್ದಾರೆ.</p>.<p>ಮಲೇಷ್ಯಾದ ಇಜಾರ್ ಅಹ್ಮದ್ ಒಟ್ಟು 261 ಕೆ.ಜಿ. ಭಾರ ಎತ್ತುವ ಮೂಲಕ ಚಿನ್ನದ ಪದಕ ಜಯಿಸಿದರೆ, ಶ್ರೀಲಂಕಾದ ಚತುರಂಗ ಲಕ್ಮಲ್ ಕಂಚಿನ ಪದಕ ಗೆದ್ದಿದ್ದಾರೆ.</p>.<p>ಗುರುರಾಜ್ ಕುಂದಾಪುರ ತಾಲ್ಲೂಕಿನ ಚಿತ್ತೂರು ಸಮೀಪದ ಜೆಡ್ಡು ಗ್ರಾಮದವರು. ಆಟೋ ರಿಕ್ಷಾ ಚಾಲಕ ಮಹಾಬಲ ಪೂಜಾರಿ ಮತ್ತು ಪದ್ದು ದಂಪತಿಯ ಆರು ಮಕ್ಕಳಲ್ಲಿ ಗುರು ಒಬ್ಬರು. ಆರಂಭಿಕ ದಿನಗಳಲ್ಲಿ ಕುಸ್ತಿ, ಪೋಲ್ವಾಲ್ಟ್ನಲ್ಲಿ ಆಸಕ್ತಿ ಬೆಳೆಸಿಕೊಡಿದ್ದ ಇವರು ನಂತರ ವೇಟ್ಲಿಫ್ಟಿಂಗ್ನಲ್ಲಿ ಸಾಧನೆ ಮಾಡಿದ್ದಾರೆ.</p>.<p><strong>ಇನ್ನಷ್ಟು...</strong></p>.<p>* <a href="http://www.prajavani.net/news/article/2018/03/26/561755.html" target="_blank">ಗೋಲ್ಡ್ಕೋಸ್ಟ್ನಲ್ಲಿ ‘ಕುಡ್ಲ’ದ ಹುಡುಗನ ಸವಾಲು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಲ್ಡ್ಕೋಸ್ಟ್:</strong> ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕನ್ನಡಿಗ <a href="http://www.prajavani.net/news/article/2018/03/26/561755.html" target="_blank">ಗುರುರಾಜ್</a> ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಇದರೊಂದಿಗೆ ಭಾರತ ಮೊದಲ ಪದಕ ಗೆದ್ದಂತಾಗಿದೆ.</p>.<p>ಪುರುಷರ ವಿಭಾಗದ 56 ಕೆ.ಜಿ. ವೇಟ್ಲಿಫ್ಟಿಂಗ್ನಲ್ಲಿ ಗುರುರಾಜ್ ಒಟ್ಟು 249 ಕೆ.ಜಿ. ಭಾರ ಎತ್ತುವ ಮೂಲಕ ಈ ಸಾಧನೆ ಮಾಡಿದ್ದಾರೆ. ಮೊದಲಿಗೆ 111 ಕೆ.ಜಿ. ಭಾರ ಎತ್ತಿದ ಅವರು ನಂತರ 138 ಕೆ.ಜಿ. ಭಾರ ಎತ್ತಿದ್ದಾರೆ.</p>.<p>ಮಲೇಷ್ಯಾದ ಇಜಾರ್ ಅಹ್ಮದ್ ಒಟ್ಟು 261 ಕೆ.ಜಿ. ಭಾರ ಎತ್ತುವ ಮೂಲಕ ಚಿನ್ನದ ಪದಕ ಜಯಿಸಿದರೆ, ಶ್ರೀಲಂಕಾದ ಚತುರಂಗ ಲಕ್ಮಲ್ ಕಂಚಿನ ಪದಕ ಗೆದ್ದಿದ್ದಾರೆ.</p>.<p>ಗುರುರಾಜ್ ಕುಂದಾಪುರ ತಾಲ್ಲೂಕಿನ ಚಿತ್ತೂರು ಸಮೀಪದ ಜೆಡ್ಡು ಗ್ರಾಮದವರು. ಆಟೋ ರಿಕ್ಷಾ ಚಾಲಕ ಮಹಾಬಲ ಪೂಜಾರಿ ಮತ್ತು ಪದ್ದು ದಂಪತಿಯ ಆರು ಮಕ್ಕಳಲ್ಲಿ ಗುರು ಒಬ್ಬರು. ಆರಂಭಿಕ ದಿನಗಳಲ್ಲಿ ಕುಸ್ತಿ, ಪೋಲ್ವಾಲ್ಟ್ನಲ್ಲಿ ಆಸಕ್ತಿ ಬೆಳೆಸಿಕೊಡಿದ್ದ ಇವರು ನಂತರ ವೇಟ್ಲಿಫ್ಟಿಂಗ್ನಲ್ಲಿ ಸಾಧನೆ ಮಾಡಿದ್ದಾರೆ.</p>.<p><strong>ಇನ್ನಷ್ಟು...</strong></p>.<p>* <a href="http://www.prajavani.net/news/article/2018/03/26/561755.html" target="_blank">ಗೋಲ್ಡ್ಕೋಸ್ಟ್ನಲ್ಲಿ ‘ಕುಡ್ಲ’ದ ಹುಡುಗನ ಸವಾಲು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>