<p><strong>ನವದೆಹಲಿ (ಪಿಟಿಐ): </strong>ಭಾರತ ತಂಡ ಇಲ್ಲಿ ನಡೆಯುತ್ತಿರುವ ಜೂನಿಯರ್ ವಿಶ್ವಕಪ್ ಟೂರ್ನಿಯ 9 ರಿಂದ 12 ನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಜಯ ಸಾಧಿಸಿತು. <br /> <br /> ಗುರುವಾರ ಮೇಜರ್ ಧ್ಯಾನ್ಚಂದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 4–2 ಗೋಲುಗಳಿಂದ ಭಾರತ ಜಯ ಸಂಪಾದಿಸಿತು.<br /> ಕ್ವಾರ್ಟರ್ ಫೈನಲ್ ಅವಕಾಶವನ್ನು ಕೈಚೆಲ್ಲುವ ಮೂಲಕ ಗಾಯಗೊಂಡ ಹುಲಿಗಳಾಂತಾಗಿದ್ದ ಭಾರತದ ಆಟಗಾರರು ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿದರು.<br /> <br /> ಪಂದ್ಯದ ಆರಂಭದ ನಾಲ್ಕನೇ ನಿಮಿಷದಲ್ಲಿ ರಮಣ್ ದೀಪ್ ಸಿಂಗ್ ಗೋಲು ಗಳಿಸುವ ಮೂಲಕ ಮುನ್ನಡೆ ತಂದುಕೊಟ್ಟರು. ಏಳನೇ ನಿಮಿಷದಲ್ಲಿ ಡ್ರಾಗ್ ಫ್ಲಿಕ್ ಪರಿಣಿತ ಅಮಿತ್ ರೋಹಿದಾಸ್ ಗಳಿಸಿದ ಗೋಲಿನೊಂದಿಗೆ ಭಾರತ 2–0 ಮುನ್ನಡೆ ತನ್ನದಾಗಿಸಿಕೊಂಡಿತು.<br /> ನಂತರ ಮತ್ತೆ ಮಿಂಚಿನ ಆಟ ಪ್ರದರ್ಶಿಸಿದ ರಮಣ್ದೀಪ್ 31 ನೇ ನಿಮಿಷದಲ್ಲಿ ಮತ್ತೊಂದು ಗೋಲು ಗಳಿಸುವ ಮೂಲಕ ಮುನ್ನಡೆಯನ್ನು 3–0 ಗೆ ಹೆಚ್ಚಿಸಿದರು.<br /> <br /> ಪಂದ್ಯದ 38 ನೇ ನಿಮಿಷದಲ್ಲಿ ಲುಕಾಸ್ ಮಾರ್ಟಿನ್ಜ್ ಗೋಲು ಬಾರಿಸುವ ಮೂಲಕ ಅರ್ಜೆಂಟೀನಾಗೆ ಮೊದಲ ಗೋಲು ತಂದಿತ್ತರು. ಆದರೆ 40 ನೇ ನಿಮಿಷದಲ್ಲಿ ಗುರ್ಜಿಂಧರ್ ಸಿಂಗ್ ಗಳಿಸಿದ ಗೋಲಿನೊಂದಿಗೆ ಭಾರತ 4–1 ರಲ್ಲಿ ಮುನ್ನಡೆ ಸಾಧಿಸಿ ಜಯವನ್ನು ಖಾತ್ರಿಪಡಿಸಿಕೊಂಡಿತು.<br /> <br /> ಅಂತಿಮವಾಗಿ ಅರ್ಜೆಂಟೀನಾದ ಲಾವುತರೊ ಡಿಯಾಜ್ 69 ನೇ ನಿಮಿಷದಲ್ಲಿ ಗೋಲುಗಳಿಸಿದರಾದರೂ ತಂಡವನ್ನು ಸೋಲಿನಿಂದ ಪಾರುಮಾಡಲಾಗಲಿಲ್ಲ.ಬದಲಾಗಿ ಗೋಲಿನ ಅಂತರವನ್ನು ಕಡಿಮೆ ಮಾಡಿದರು.<br /> <br /> ಈ ಜಯದೊಂದಿಗೆ ಭಾರತ ಶನಿವಾರ ನಡೆಯಲಿರುವ 9 ಮತ್ತು 10 ನೇ ಸ್ಥಾನಕ್ಕಾಗಿ ನಡೆಯುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ.<br /> <br /> ಪಾಕಿಸ್ತಾನ ತಂಡ ಗುರುವಾರ ನಡೆದ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ 4–0 ರಿಂದ ಜಯ ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಭಾರತ ತಂಡ ಇಲ್ಲಿ ನಡೆಯುತ್ತಿರುವ ಜೂನಿಯರ್ ವಿಶ್ವಕಪ್ ಟೂರ್ನಿಯ 9 ರಿಂದ 12 ನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಜಯ ಸಾಧಿಸಿತು. <br /> <br /> ಗುರುವಾರ ಮೇಜರ್ ಧ್ಯಾನ್ಚಂದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 4–2 ಗೋಲುಗಳಿಂದ ಭಾರತ ಜಯ ಸಂಪಾದಿಸಿತು.<br /> ಕ್ವಾರ್ಟರ್ ಫೈನಲ್ ಅವಕಾಶವನ್ನು ಕೈಚೆಲ್ಲುವ ಮೂಲಕ ಗಾಯಗೊಂಡ ಹುಲಿಗಳಾಂತಾಗಿದ್ದ ಭಾರತದ ಆಟಗಾರರು ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿದರು.<br /> <br /> ಪಂದ್ಯದ ಆರಂಭದ ನಾಲ್ಕನೇ ನಿಮಿಷದಲ್ಲಿ ರಮಣ್ ದೀಪ್ ಸಿಂಗ್ ಗೋಲು ಗಳಿಸುವ ಮೂಲಕ ಮುನ್ನಡೆ ತಂದುಕೊಟ್ಟರು. ಏಳನೇ ನಿಮಿಷದಲ್ಲಿ ಡ್ರಾಗ್ ಫ್ಲಿಕ್ ಪರಿಣಿತ ಅಮಿತ್ ರೋಹಿದಾಸ್ ಗಳಿಸಿದ ಗೋಲಿನೊಂದಿಗೆ ಭಾರತ 2–0 ಮುನ್ನಡೆ ತನ್ನದಾಗಿಸಿಕೊಂಡಿತು.<br /> ನಂತರ ಮತ್ತೆ ಮಿಂಚಿನ ಆಟ ಪ್ರದರ್ಶಿಸಿದ ರಮಣ್ದೀಪ್ 31 ನೇ ನಿಮಿಷದಲ್ಲಿ ಮತ್ತೊಂದು ಗೋಲು ಗಳಿಸುವ ಮೂಲಕ ಮುನ್ನಡೆಯನ್ನು 3–0 ಗೆ ಹೆಚ್ಚಿಸಿದರು.<br /> <br /> ಪಂದ್ಯದ 38 ನೇ ನಿಮಿಷದಲ್ಲಿ ಲುಕಾಸ್ ಮಾರ್ಟಿನ್ಜ್ ಗೋಲು ಬಾರಿಸುವ ಮೂಲಕ ಅರ್ಜೆಂಟೀನಾಗೆ ಮೊದಲ ಗೋಲು ತಂದಿತ್ತರು. ಆದರೆ 40 ನೇ ನಿಮಿಷದಲ್ಲಿ ಗುರ್ಜಿಂಧರ್ ಸಿಂಗ್ ಗಳಿಸಿದ ಗೋಲಿನೊಂದಿಗೆ ಭಾರತ 4–1 ರಲ್ಲಿ ಮುನ್ನಡೆ ಸಾಧಿಸಿ ಜಯವನ್ನು ಖಾತ್ರಿಪಡಿಸಿಕೊಂಡಿತು.<br /> <br /> ಅಂತಿಮವಾಗಿ ಅರ್ಜೆಂಟೀನಾದ ಲಾವುತರೊ ಡಿಯಾಜ್ 69 ನೇ ನಿಮಿಷದಲ್ಲಿ ಗೋಲುಗಳಿಸಿದರಾದರೂ ತಂಡವನ್ನು ಸೋಲಿನಿಂದ ಪಾರುಮಾಡಲಾಗಲಿಲ್ಲ.ಬದಲಾಗಿ ಗೋಲಿನ ಅಂತರವನ್ನು ಕಡಿಮೆ ಮಾಡಿದರು.<br /> <br /> ಈ ಜಯದೊಂದಿಗೆ ಭಾರತ ಶನಿವಾರ ನಡೆಯಲಿರುವ 9 ಮತ್ತು 10 ನೇ ಸ್ಥಾನಕ್ಕಾಗಿ ನಡೆಯುವ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ.<br /> <br /> ಪಾಕಿಸ್ತಾನ ತಂಡ ಗುರುವಾರ ನಡೆದ ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ 4–0 ರಿಂದ ಜಯ ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>