<p><strong>ಬೆಂಗಳೂರು: </strong>ಪ್ರಶಸ್ತಿ ಗೆಲ್ಲುವ ನೆಚ್ಚಿನ ಸ್ಪರ್ಧಿ ಎನಿಸಿರುವ ಎಸ್. ಚಿಕ್ಕರಂಗಪ್ಪ ಅವರು ಇಲ್ಲಿ ಆರಂಭವಾದ `ಟೊಯೋಟ ಕೊರೊಲಾ ಆಲ್ಟಿಸ್~ ದಕ್ಷಿಣ ಭಾರತ ಅಮೆಚೂರ್ ಗಾಲ್ಫ್ ಚಾಂಪಿಯನ್ಷಿಪ್ನ ಮೊದಲ ದಿನದಲ್ಲಿ ಮುನ್ನಡೆ ತಮ್ಮದಾಗಿಸಿಕೊಂಡಿದ್ದಾರೆ.<br /> <br /> ಕರ್ನಾಟಕ ಗಾಲ್ಫ್ ಸಂಸ್ಥೆ ಕೋರ್ಸ್ನಲ್ಲಿ ಮಂಗಳವಾರ ನಿಖರ ಆಟ ತೋರಿದ ಸ್ಥಳೀಯ ಪ್ರತಿಭೆ ಚಿಕ್ಕರಂಗಪ್ಪ ಎರಡು ಕಡಿಮೆ ಸ್ಟ್ರೋಕ್ಗಳನ್ನು (70) ಬಳಸಿಕೊಂಡು ಸ್ಪರ್ಧೆ ಕೊನೆಗೊಳಿಸಿದರು. <br /> <br /> ದೆಹಲಿಯ ಗಗನ್ ವರ್ಮಾ (72) ಅವರು ಎರಡನೇ ಸ್ಥಾನದಲ್ಲಿದ್ದಾರೆ. ದೆಹಲಿಯವರೇ ಆದ ಸೌರಭ್ ಬಹುಗುಣ (73) ಮೂರನೇ ಸ್ಥಾನದೊಂದಿಗೆ ಮೊದಲ ದಿನದ ಸ್ಪರ್ಧೆ ಕೊನೆಗೊಳಿಸಿದರು. <br /> <br /> `ಮೊದಲ ದಿನ ನಿಜವಾಗಿಯೂ ಉತ್ತಮ ಪ್ರದರ್ಶನ ನೀಡಿದ್ದೇನೆ. ಇಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಾಧ್ಯವಾದದ್ದು ಇದಕ್ಕೆ ಕಾರಣ. ಮುಂದಿನ ಸುತ್ತುಗಳಲ್ಲಿ ಇಂತಹದೇ ಪ್ರದರ್ಶನ ಪುನರಾವರ್ತಿಸುವ ವಿಶ್ವಾಸ ಹೊಂದಿದ್ದೇನೆ~ ಎಂದು ಚಿಕ್ಕರಂಗಪ್ಪ ಪ್ರತಿಕ್ರಿಯಿಸಿದರು. <br /> <br /> ಉದಯನ್ ಮಾನೆ, ಕಾನಿಷ್ಕ್ ಮದನ್, ಅಶ್ಬೀರ್ ಸಿಂಗ್ ಸೈನಿ ಮತ್ತು ಸಮರ್ಜೀತ್ (ತಲಾ 74) ಅವರು ಜಂಟಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಇನ್ನೊಬ್ಬ ಯುವ ಪ್ರತಿಭೆ ತ್ರಿಶೂಲ್ ಚಿನ್ನಪ್ಪ (79) ಅವರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. <br /> <br /> ಖಾಲಿನ್ ಜೋಷಿ (75) ಅವರು ಇತರ ಒಂಬತ್ತು ಸ್ಪರ್ಧಿಗಳೊಂದಿಗೆ ಜಂಟಿ ಐದನೇ ಸ್ಥಾನದಲ್ಲಿದ್ದಾರೆ. <br /> ಕಣದಲ್ಲಿರುವ 84 ಸ್ಪರ್ಧಿಗಳಲ್ಲಿ ಹೆಚ್ಚಿನವರು ಇಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ಪ್ರಯಾಸಪಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪ್ರಶಸ್ತಿ ಗೆಲ್ಲುವ ನೆಚ್ಚಿನ ಸ್ಪರ್ಧಿ ಎನಿಸಿರುವ ಎಸ್. ಚಿಕ್ಕರಂಗಪ್ಪ ಅವರು ಇಲ್ಲಿ ಆರಂಭವಾದ `ಟೊಯೋಟ ಕೊರೊಲಾ ಆಲ್ಟಿಸ್~ ದಕ್ಷಿಣ ಭಾರತ ಅಮೆಚೂರ್ ಗಾಲ್ಫ್ ಚಾಂಪಿಯನ್ಷಿಪ್ನ ಮೊದಲ ದಿನದಲ್ಲಿ ಮುನ್ನಡೆ ತಮ್ಮದಾಗಿಸಿಕೊಂಡಿದ್ದಾರೆ.<br /> <br /> ಕರ್ನಾಟಕ ಗಾಲ್ಫ್ ಸಂಸ್ಥೆ ಕೋರ್ಸ್ನಲ್ಲಿ ಮಂಗಳವಾರ ನಿಖರ ಆಟ ತೋರಿದ ಸ್ಥಳೀಯ ಪ್ರತಿಭೆ ಚಿಕ್ಕರಂಗಪ್ಪ ಎರಡು ಕಡಿಮೆ ಸ್ಟ್ರೋಕ್ಗಳನ್ನು (70) ಬಳಸಿಕೊಂಡು ಸ್ಪರ್ಧೆ ಕೊನೆಗೊಳಿಸಿದರು. <br /> <br /> ದೆಹಲಿಯ ಗಗನ್ ವರ್ಮಾ (72) ಅವರು ಎರಡನೇ ಸ್ಥಾನದಲ್ಲಿದ್ದಾರೆ. ದೆಹಲಿಯವರೇ ಆದ ಸೌರಭ್ ಬಹುಗುಣ (73) ಮೂರನೇ ಸ್ಥಾನದೊಂದಿಗೆ ಮೊದಲ ದಿನದ ಸ್ಪರ್ಧೆ ಕೊನೆಗೊಳಿಸಿದರು. <br /> <br /> `ಮೊದಲ ದಿನ ನಿಜವಾಗಿಯೂ ಉತ್ತಮ ಪ್ರದರ್ಶನ ನೀಡಿದ್ದೇನೆ. ಇಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಾಧ್ಯವಾದದ್ದು ಇದಕ್ಕೆ ಕಾರಣ. ಮುಂದಿನ ಸುತ್ತುಗಳಲ್ಲಿ ಇಂತಹದೇ ಪ್ರದರ್ಶನ ಪುನರಾವರ್ತಿಸುವ ವಿಶ್ವಾಸ ಹೊಂದಿದ್ದೇನೆ~ ಎಂದು ಚಿಕ್ಕರಂಗಪ್ಪ ಪ್ರತಿಕ್ರಿಯಿಸಿದರು. <br /> <br /> ಉದಯನ್ ಮಾನೆ, ಕಾನಿಷ್ಕ್ ಮದನ್, ಅಶ್ಬೀರ್ ಸಿಂಗ್ ಸೈನಿ ಮತ್ತು ಸಮರ್ಜೀತ್ (ತಲಾ 74) ಅವರು ಜಂಟಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಇನ್ನೊಬ್ಬ ಯುವ ಪ್ರತಿಭೆ ತ್ರಿಶೂಲ್ ಚಿನ್ನಪ್ಪ (79) ಅವರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. <br /> <br /> ಖಾಲಿನ್ ಜೋಷಿ (75) ಅವರು ಇತರ ಒಂಬತ್ತು ಸ್ಪರ್ಧಿಗಳೊಂದಿಗೆ ಜಂಟಿ ಐದನೇ ಸ್ಥಾನದಲ್ಲಿದ್ದಾರೆ. <br /> ಕಣದಲ್ಲಿರುವ 84 ಸ್ಪರ್ಧಿಗಳಲ್ಲಿ ಹೆಚ್ಚಿನವರು ಇಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ಪ್ರಯಾಸಪಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>