<p><strong>ನಾಗಪುರ (ಪಿಟಿಐ):</strong> ಭಾರತ-ದಕ್ಷಿಣ ಆಫ್ರಿಕಾ ನಡುವೆ ಶನಿವಾರ ಇಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಕ್ಕೆ ಟಿಕೆಟ್ ಖರೀದಿಸುವಾಗ ನೂಕುನುಗ್ಗಲು ಸಂಭವಿಸಿದ್ದು ಅಭಿಮಾನಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.<br /> <br /> ಸಿವಿಲ್ ಲೈನ್ಸ್ನಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆಯ ಹಳೆಯ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ. ಇಲ್ಲಿಂದ 20 ಕಿ.ಮೀ. ದೂರದ ಜಾಮ್ತಾದಲ್ಲಿರುವ ನೂತನ ಕ್ರೀಡಾಂಗಣದಲ್ಲಿ ಮಾರ್ಚ್ 12ರಂದು ಪಂದ್ಯ ನಡೆಯಲಿದೆ.<br /> <br /> ಈ ಪಂದ್ಯ ವೀಕ್ಷಿಸಲು ಟಿಕೆಟ್ ಖರೀದಿಸಲು ಅಭಿಮಾನಿಗಳು ಸೋಮವಾರ ರಾತ್ರಿಯಿಂದಲೇ ಸಾಲಿನಲ್ಲಿ ನಿಂತಿದ್ದರು. ಮಂಗಳವಾರ ಬೆಳಿಗ್ಗೆ ಟಿಕೆಟ್ ಕೌಂಟರ್ ತೆರೆದಾಗ ಒಮ್ಮೆಲೇ ನೂಗುನುಗ್ಗಲು ಸಂಭವಿಸಿತು. ಅಡ್ಡ ಇಟ್ಟಿದ್ದ ಬ್ಯಾರಿಕೇಡ್ಗಳನ್ನು ಮುರಿದು ಕೌಂಟರ್ನತ್ತ ನುಗ್ಗಿದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ನೂಕುನುಗ್ಗಲನ್ನು ತಡೆಯಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಹಾಗಾಗಿ ಸಂಘಟಕರು ಟಿಕೆಟ್ ಕೌಂಟರ್ಅನ್ನು ಕೆಲಕಾಲ ಮುಚ್ಚಿದ್ದರು. ಬಳಿಕ ಮತ್ತೆ ತೆರೆದರು.<br /> <br /> ಲಾಠಿ ಪ್ರಹಾರದಲ್ಲಿ ಕೆಲ ಅಭಿಮಾನಿಗಳು ಗಾಯಗೊಂಡಿದ್ದಾರೆ. ಭಾರತ-ಇಂಗ್ಲೆಂಡ್ ನಡುವಿನ ಪಂದ್ಯಕ್ಕೆ ಟಿಕೆಟ್ ಖರೀದಿಸುವಾಗ ಕೂಡ ಬೆಂಗಳೂರಿನಲ್ಲಿ ಲಾಠಿ ಚಾರ್ಜ್ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಪುರ (ಪಿಟಿಐ):</strong> ಭಾರತ-ದಕ್ಷಿಣ ಆಫ್ರಿಕಾ ನಡುವೆ ಶನಿವಾರ ಇಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಕ್ಕೆ ಟಿಕೆಟ್ ಖರೀದಿಸುವಾಗ ನೂಕುನುಗ್ಗಲು ಸಂಭವಿಸಿದ್ದು ಅಭಿಮಾನಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.<br /> <br /> ಸಿವಿಲ್ ಲೈನ್ಸ್ನಲ್ಲಿರುವ ವಿದರ್ಭ ಕ್ರಿಕೆಟ್ ಸಂಸ್ಥೆಯ ಹಳೆಯ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದೆ. ಇಲ್ಲಿಂದ 20 ಕಿ.ಮೀ. ದೂರದ ಜಾಮ್ತಾದಲ್ಲಿರುವ ನೂತನ ಕ್ರೀಡಾಂಗಣದಲ್ಲಿ ಮಾರ್ಚ್ 12ರಂದು ಪಂದ್ಯ ನಡೆಯಲಿದೆ.<br /> <br /> ಈ ಪಂದ್ಯ ವೀಕ್ಷಿಸಲು ಟಿಕೆಟ್ ಖರೀದಿಸಲು ಅಭಿಮಾನಿಗಳು ಸೋಮವಾರ ರಾತ್ರಿಯಿಂದಲೇ ಸಾಲಿನಲ್ಲಿ ನಿಂತಿದ್ದರು. ಮಂಗಳವಾರ ಬೆಳಿಗ್ಗೆ ಟಿಕೆಟ್ ಕೌಂಟರ್ ತೆರೆದಾಗ ಒಮ್ಮೆಲೇ ನೂಗುನುಗ್ಗಲು ಸಂಭವಿಸಿತು. ಅಡ್ಡ ಇಟ್ಟಿದ್ದ ಬ್ಯಾರಿಕೇಡ್ಗಳನ್ನು ಮುರಿದು ಕೌಂಟರ್ನತ್ತ ನುಗ್ಗಿದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ನೂಕುನುಗ್ಗಲನ್ನು ತಡೆಯಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಹಾಗಾಗಿ ಸಂಘಟಕರು ಟಿಕೆಟ್ ಕೌಂಟರ್ಅನ್ನು ಕೆಲಕಾಲ ಮುಚ್ಚಿದ್ದರು. ಬಳಿಕ ಮತ್ತೆ ತೆರೆದರು.<br /> <br /> ಲಾಠಿ ಪ್ರಹಾರದಲ್ಲಿ ಕೆಲ ಅಭಿಮಾನಿಗಳು ಗಾಯಗೊಂಡಿದ್ದಾರೆ. ಭಾರತ-ಇಂಗ್ಲೆಂಡ್ ನಡುವಿನ ಪಂದ್ಯಕ್ಕೆ ಟಿಕೆಟ್ ಖರೀದಿಸುವಾಗ ಕೂಡ ಬೆಂಗಳೂರಿನಲ್ಲಿ ಲಾಠಿ ಚಾರ್ಜ್ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>