ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳ ನಡುವೆ ಭಾನುವಾರ ನಡೆದ ಹಣಾಹಣಿಯ ನಂತರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಪಂದ್ಯದಲ್ಲಿ ಕೆಕೆಆರ್ ತಂಡವು 4 ವಿಕೆಟ್ಗಳ ಅಂತರದಿಂದ ಜಯಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ಸಿಬಿಯು 20 ಓವರ್ಗಳಲ್ಲಿ 7 ವಿಕೆಟ್ಗಳಿಗೆ 176 ರನ್ ಗಳಿಸಿತ್ತು. ಕೆಕೆಆರ್ ತಂಡವು 18.5 ಓವರ್ಗಳಲ್ಲಿ 6 ವಿಕೆಟ್ಗಳಿಗೆ 177 ರನ್ ಗಳಿಸಿ ಗೆದ್ದಿತು. ಸುನಿಲ್ ನಾರಾಯಣ್ (50; 19ಎ, 5ಸಿ, 4ಬೌಂ) ಅರ್ಧಶತಕ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು.