<p><strong>ಕರಾಚಿ (ಪಿಟಿಐ):</strong> ಪಾಕಿಸ್ತಾನ ಕ್ರಿಕೆಟ್ ತಂಡವು ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಉನ್ನತ ಸಾಧನೆ ಮಾಡಿದಲ್ಲಿ ದೇಶಕ್ಕೂ ಪ್ರಯೋಜನ ಆಗಲಿದೆ ಎಂದು ಪಾಕ್ ಆಂತರಿಕ ಆಡಳಿತ ಸಚಿವ ರೆಹಮಾನ್ ಮಲಿಕ್ ಅಭಿಪ್ರಾಯಪಟ್ಟಿದ್ದಾರೆ.<br /> <br /> ಕ್ರಿಕೆಟ್ ಕ್ಷೇತ್ರದಲ್ಲಿ ಪಾಕ್ ಸ್ಥಾನ ದೊಡ್ಡದು ಎನ್ನುವುದನ್ನು ಸಾಬೀತು ಪಡಿಸಬೇಕು.ಆ ಮೂಲಕವೇ ಎಲ್ಲ ಅಂತರರಾಷ್ಟ್ರೀಯ ಕ್ರಿಕೆಟ್ ತಂಡಗಳು ಪಾಕಿಸ್ತಾನಕ್ಕೆ ಬಂದು ಆಡುವಂತೆ ಒತ್ತಡ ಹೆಚ್ಚಿಸಬೇಕು.ಆ ನಿಟ್ಟಿನಲ್ಲಿ ಈ ಬಾರಿಯ ವಿಶ್ವಕಪ್ ಮಹತ್ವದ್ದಾಗಿದೆ.ತಂಡದ ಆಟಗಾರರ ಮೇಲೆ ಭಾರಿ ನಿರೀಕ್ಷೆಯ ಭಾರವಿದೆ ಎಂದು ಅವರು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ‘ದೇಶವು ಅನೇಕ ಸವಾಲುಗಳನ್ನು ಎದುರಿಸಿದೆ. ಕ್ರಿಕೆಟ್ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ.ಈಗ ಜನರಿಗೆ ಸಂತಸ ನೀಡುವ ಹೊಣೆಯು ಕ್ರಿಕೆಟ್ ತಂಡದ ಮೇಲಿದೆ’ ಎಂದ ಅವರ ‘ವಿಶ್ವಕಪ್ ನಂತರ ಪರಿಸ್ಥಿತಿ ಖಂಡಿತ ಬದಲಾಗಲಿದೆ.ದೇಶದಲ್ಲಿ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್ ಸಾಧ್ಯವಾಗುತ್ತದೆ’ ಎಂದು ಹೇಳಿದರು.<br /> <br /> ‘ಪಾಕಿಸ್ತಾನದಲ್ಲಿ ಆಡಲು ಬರುವ ಬೇರೆ ದೇಶಗಳ ಕ್ರೀಡಾ ತಂಡಗಳಿಗೆ ಉನ್ನತ ಮಟ್ಟದ ಭದ್ರತೆಯನ್ನು ಕಲ್ಪಿಸುವುದು ನಮ್ಮ ಹೊಣೆ.ಅದಕ್ಕಾಗಿ ಎಲ್ಲ ರೀತಿಯಲ್ಲಿ ವ್ಯವಸ್ಥೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳುತ್ತದೆ.ದೇಶದಲ್ಲಿ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ನೋಡುವುದು ಸಾಧ್ಯವಾಗಬೇಕು’ ಎಂದು ಆಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ (ಪಿಟಿಐ):</strong> ಪಾಕಿಸ್ತಾನ ಕ್ರಿಕೆಟ್ ತಂಡವು ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಉನ್ನತ ಸಾಧನೆ ಮಾಡಿದಲ್ಲಿ ದೇಶಕ್ಕೂ ಪ್ರಯೋಜನ ಆಗಲಿದೆ ಎಂದು ಪಾಕ್ ಆಂತರಿಕ ಆಡಳಿತ ಸಚಿವ ರೆಹಮಾನ್ ಮಲಿಕ್ ಅಭಿಪ್ರಾಯಪಟ್ಟಿದ್ದಾರೆ.<br /> <br /> ಕ್ರಿಕೆಟ್ ಕ್ಷೇತ್ರದಲ್ಲಿ ಪಾಕ್ ಸ್ಥಾನ ದೊಡ್ಡದು ಎನ್ನುವುದನ್ನು ಸಾಬೀತು ಪಡಿಸಬೇಕು.ಆ ಮೂಲಕವೇ ಎಲ್ಲ ಅಂತರರಾಷ್ಟ್ರೀಯ ಕ್ರಿಕೆಟ್ ತಂಡಗಳು ಪಾಕಿಸ್ತಾನಕ್ಕೆ ಬಂದು ಆಡುವಂತೆ ಒತ್ತಡ ಹೆಚ್ಚಿಸಬೇಕು.ಆ ನಿಟ್ಟಿನಲ್ಲಿ ಈ ಬಾರಿಯ ವಿಶ್ವಕಪ್ ಮಹತ್ವದ್ದಾಗಿದೆ.ತಂಡದ ಆಟಗಾರರ ಮೇಲೆ ಭಾರಿ ನಿರೀಕ್ಷೆಯ ಭಾರವಿದೆ ಎಂದು ಅವರು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ‘ದೇಶವು ಅನೇಕ ಸವಾಲುಗಳನ್ನು ಎದುರಿಸಿದೆ. ಕ್ರಿಕೆಟ್ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ.ಈಗ ಜನರಿಗೆ ಸಂತಸ ನೀಡುವ ಹೊಣೆಯು ಕ್ರಿಕೆಟ್ ತಂಡದ ಮೇಲಿದೆ’ ಎಂದ ಅವರ ‘ವಿಶ್ವಕಪ್ ನಂತರ ಪರಿಸ್ಥಿತಿ ಖಂಡಿತ ಬದಲಾಗಲಿದೆ.ದೇಶದಲ್ಲಿ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್ ಸಾಧ್ಯವಾಗುತ್ತದೆ’ ಎಂದು ಹೇಳಿದರು.<br /> <br /> ‘ಪಾಕಿಸ್ತಾನದಲ್ಲಿ ಆಡಲು ಬರುವ ಬೇರೆ ದೇಶಗಳ ಕ್ರೀಡಾ ತಂಡಗಳಿಗೆ ಉನ್ನತ ಮಟ್ಟದ ಭದ್ರತೆಯನ್ನು ಕಲ್ಪಿಸುವುದು ನಮ್ಮ ಹೊಣೆ.ಅದಕ್ಕಾಗಿ ಎಲ್ಲ ರೀತಿಯಲ್ಲಿ ವ್ಯವಸ್ಥೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳುತ್ತದೆ.ದೇಶದಲ್ಲಿ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ನೋಡುವುದು ಸಾಧ್ಯವಾಗಬೇಕು’ ಎಂದು ಆಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>