<p><strong>ಬೆಂಗಳೂರು: </strong> `ರಾಜ್ಯ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದೆ. ಸಾಕಷ್ಟು ಸಮಸ್ಯೆಗಳ ನಡುವೆಯೂ ಈ ಸಾಧನೆ ಮಾಡಿದ್ದೇವೆ. ಮುಂದೆ ಇನ್ನಷ್ಟು ಸಾಧನೆ ಮಾಡಲು ರಾಜ್ಯದ ಈ ಬೆಂಬಲ ಸ್ಫೂರ್ತಿ ನೀಡಿದೆ~ ಎಂದು ಭಾರತ ತಂಡದಲ್ಲಿದ್ದ ಕರ್ನಾಟಕದ ಎಸ್.ವಿ.ಸುನಿಲ್ ಪ್ರತಿಕ್ರಿಯಿಸಿದರು.<br /> <br /> ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಜಯಿಸಿದ ಭಾರತ ಹಾಕಿ ತಂಡದಲ್ಲಿದ್ದ ಕರ್ನಾಟಕದ ನಾಲ್ಕು ಮಂದಿ ಆಟಗಾರರಿಗೆ ರಾಜ್ಯ ಸರ್ಕಾರ ಬುಧವಾರ ತಲಾ 5 ಲಕ್ಷ ರೂಪಾಯಿ ಬಹುಮಾನ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಪತ್ರಿಕೆಯೊಂದಿಗೆ ಅವರು ಮಾತನಾಡಿದರು. <br /> <br /> ರಾಜ್ಯದ ಆಟಗಾರರ ಮನದಾಳದ ಮಾತನ್ನು `ದಯವಿಟ್ಟು ನಮ್ಮತ್ತ ಗಮನ ಹರಿಸಿ~ ಎನ್ನುವ ಶೀರ್ಷಿಕೆ ಅಡಿ `ಪ್ರಜಾವಾಣಿ~ ಬುಧವಾರ ವಿಶೇಷ ಲೇಖನ ಪ್ರಕಟಿಸಿತ್ತು. ಆದ್ದರಿಂದ ಸುನಿಲ್ ಪತ್ರಿಕೆಗೆ ಧನ್ಯವಾದ ಅರ್ಪಿಸಿದ್ದಾರೆ. <br /> <br /> ಒಲಿಂಪಿಕ್ ಕ್ರೀಡಾಕೂಟಕ್ಕೆ ಇನ್ನಷ್ಟು ಉತ್ತಮ ರೀತಿಯಲ್ಲಿ ಸಜ್ಜುಗೊಳ್ಳಲು ರಾಜ್ಯ ಸರ್ಕಾರ ಬೆಂಬಲ ನೀಡಿದೆ. ಇದರಿಂದ ನಾವು ಇನ್ನಷ್ಟು ಸಾಧನೆ ಮಾಡುತ್ತೇವೆ. ನಿಜಕ್ಕೂ ಖುಷಿಯಾಗಿದೆ ಎಂದು ಸಂತಸದಿಂದ ಅವರು ಪ್ರತಿಕ್ರಿಯಿಸಿದರು. ಇಗ್ನೇಸ್ ಟರ್ಕಿ ಒಡಿಶಾ ಮೂಲದವರು. ಆದರೆ ಅವರು ಕರ್ನಾಟಕ ತಂಡ ಪ್ರತಿನಿಧಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong> `ರಾಜ್ಯ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದೆ. ಸಾಕಷ್ಟು ಸಮಸ್ಯೆಗಳ ನಡುವೆಯೂ ಈ ಸಾಧನೆ ಮಾಡಿದ್ದೇವೆ. ಮುಂದೆ ಇನ್ನಷ್ಟು ಸಾಧನೆ ಮಾಡಲು ರಾಜ್ಯದ ಈ ಬೆಂಬಲ ಸ್ಫೂರ್ತಿ ನೀಡಿದೆ~ ಎಂದು ಭಾರತ ತಂಡದಲ್ಲಿದ್ದ ಕರ್ನಾಟಕದ ಎಸ್.ವಿ.ಸುನಿಲ್ ಪ್ರತಿಕ್ರಿಯಿಸಿದರು.<br /> <br /> ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಜಯಿಸಿದ ಭಾರತ ಹಾಕಿ ತಂಡದಲ್ಲಿದ್ದ ಕರ್ನಾಟಕದ ನಾಲ್ಕು ಮಂದಿ ಆಟಗಾರರಿಗೆ ರಾಜ್ಯ ಸರ್ಕಾರ ಬುಧವಾರ ತಲಾ 5 ಲಕ್ಷ ರೂಪಾಯಿ ಬಹುಮಾನ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಪತ್ರಿಕೆಯೊಂದಿಗೆ ಅವರು ಮಾತನಾಡಿದರು. <br /> <br /> ರಾಜ್ಯದ ಆಟಗಾರರ ಮನದಾಳದ ಮಾತನ್ನು `ದಯವಿಟ್ಟು ನಮ್ಮತ್ತ ಗಮನ ಹರಿಸಿ~ ಎನ್ನುವ ಶೀರ್ಷಿಕೆ ಅಡಿ `ಪ್ರಜಾವಾಣಿ~ ಬುಧವಾರ ವಿಶೇಷ ಲೇಖನ ಪ್ರಕಟಿಸಿತ್ತು. ಆದ್ದರಿಂದ ಸುನಿಲ್ ಪತ್ರಿಕೆಗೆ ಧನ್ಯವಾದ ಅರ್ಪಿಸಿದ್ದಾರೆ. <br /> <br /> ಒಲಿಂಪಿಕ್ ಕ್ರೀಡಾಕೂಟಕ್ಕೆ ಇನ್ನಷ್ಟು ಉತ್ತಮ ರೀತಿಯಲ್ಲಿ ಸಜ್ಜುಗೊಳ್ಳಲು ರಾಜ್ಯ ಸರ್ಕಾರ ಬೆಂಬಲ ನೀಡಿದೆ. ಇದರಿಂದ ನಾವು ಇನ್ನಷ್ಟು ಸಾಧನೆ ಮಾಡುತ್ತೇವೆ. ನಿಜಕ್ಕೂ ಖುಷಿಯಾಗಿದೆ ಎಂದು ಸಂತಸದಿಂದ ಅವರು ಪ್ರತಿಕ್ರಿಯಿಸಿದರು. ಇಗ್ನೇಸ್ ಟರ್ಕಿ ಒಡಿಶಾ ಮೂಲದವರು. ಆದರೆ ಅವರು ಕರ್ನಾಟಕ ತಂಡ ಪ್ರತಿನಿಧಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>