ಕ್ರೀಡಾಂಗಣದಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಸಿಎ ಪ್ರತಿನಿಧಿಗಳು ಅಂಗಳದ ಔಟ್ಫೀಲ್ಡ್ ಮತ್ತು ಆಟಗಾರರ ಡ್ರೆಸಿಂಗ್ ಕೊಠಡಿಯಲ್ಲಿನ ಸೌಲಭ್ಯಗಳ ಬಗ್ಗೆ ತೃಪ್ತರಾಗಿಲ್ಲ ಎನ್ನಲಾಗಿದೆ. ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಮತ್ತು ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರು ಪಂದ್ಯವನ್ನು ಸ್ಥಳಾಂತರಿಸುವ ಕುರಿತು ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲವೊಂದು ಹೇಳಿದೆ.