<p><strong>ರಾಂಚಿ (ಐಎಎನ್ಎಸ್): </strong>ಹತ್ತನೇ ವಿಶ್ವಕಪ್ ಜಯಿಸಿದ ನಂತರ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ ಅವರನ್ನು ಅಭೂತಪೂರ್ವವಾಗಿ ಸ್ವಾಗತಿಸಲಾಯಿತು.<br /> <br /> ವಿಶ್ವಕಪ್ ನಂತರ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಾದ್ದರಿಂದ ದೋನಿ ಅವರಿಗೆ ತವರೂರು ರಾಂಚಿಗೆ ಹೋಗಲು ಸಾಧ್ಯವಾಗಿರಲಿಲ್ಲ. ದೋನಿ ತವರಿಗೆ ಆಗಮಿಸುವ ವಿಷಯ ತಿಳಿದಿದ್ದ ಕ್ರೀಡಾ ಪ್ರೇಮಿಗಳು ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದ ಬಳಿ ಭಾರಿ ಸಂಖ್ಯೆಯಲ್ಲಿ ನೆರದಿದ್ದರು.<br /> <br /> ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳ ನಡುವೆಯೂ ಪತ್ನಿ ಸಾಕ್ಷಿ ಸಿಂಗ್ ರಾವತ್ ಜೊತೆಗೆ ದೋನಿ ಭಾರಿ ಬಿಗಿ ಭದ್ರತೆಯಲ್ಲಿ ತಮ್ಮ ಮನೆಗೆ ತೆರಳಿದರು. ನಾಯಕನಿಗೆ ತವರೂರಲ್ಲಿ ಅದ್ದೂರಿ ಸ್ವಾಗತ ನೀಡಿದ ಅಭಿಮಾನಿಗಳು ಕುಣಿದು, ಕುಪ್ಪಳಿಸಿ ಸಂಭ್ರಮಿಸಿದರು.<br /> <br /> ದೋನಿ ವಿಶ್ವಕಪ್ ಜಯಿಸಿದ ಭಾರತ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೇ ದೋನಿ ನೇತೃತ್ವದಲ್ಲಿ ಐಪಿಎಲ್ನ ನಾಲ್ಕನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿತ್ತು. <br /> <br /> ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ವಿಶ್ವಕಪ್ ಜಯಿಸಿದ 28 ವರ್ಷಗಳ ನಂತರ ಭಾರತ ದೋನಿ ನೇತೃತ್ವದಲ್ಲಿ ಟ್ರೋಫಿಯನ್ನು ಗೆದ್ದುಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ (ಐಎಎನ್ಎಸ್): </strong>ಹತ್ತನೇ ವಿಶ್ವಕಪ್ ಜಯಿಸಿದ ನಂತರ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ ಅವರನ್ನು ಅಭೂತಪೂರ್ವವಾಗಿ ಸ್ವಾಗತಿಸಲಾಯಿತು.<br /> <br /> ವಿಶ್ವಕಪ್ ನಂತರ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಾದ್ದರಿಂದ ದೋನಿ ಅವರಿಗೆ ತವರೂರು ರಾಂಚಿಗೆ ಹೋಗಲು ಸಾಧ್ಯವಾಗಿರಲಿಲ್ಲ. ದೋನಿ ತವರಿಗೆ ಆಗಮಿಸುವ ವಿಷಯ ತಿಳಿದಿದ್ದ ಕ್ರೀಡಾ ಪ್ರೇಮಿಗಳು ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದ ಬಳಿ ಭಾರಿ ಸಂಖ್ಯೆಯಲ್ಲಿ ನೆರದಿದ್ದರು.<br /> <br /> ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳ ನಡುವೆಯೂ ಪತ್ನಿ ಸಾಕ್ಷಿ ಸಿಂಗ್ ರಾವತ್ ಜೊತೆಗೆ ದೋನಿ ಭಾರಿ ಬಿಗಿ ಭದ್ರತೆಯಲ್ಲಿ ತಮ್ಮ ಮನೆಗೆ ತೆರಳಿದರು. ನಾಯಕನಿಗೆ ತವರೂರಲ್ಲಿ ಅದ್ದೂರಿ ಸ್ವಾಗತ ನೀಡಿದ ಅಭಿಮಾನಿಗಳು ಕುಣಿದು, ಕುಪ್ಪಳಿಸಿ ಸಂಭ್ರಮಿಸಿದರು.<br /> <br /> ದೋನಿ ವಿಶ್ವಕಪ್ ಜಯಿಸಿದ ಭಾರತ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೇ ದೋನಿ ನೇತೃತ್ವದಲ್ಲಿ ಐಪಿಎಲ್ನ ನಾಲ್ಕನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿತ್ತು. <br /> <br /> ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ವಿಶ್ವಕಪ್ ಜಯಿಸಿದ 28 ವರ್ಷಗಳ ನಂತರ ಭಾರತ ದೋನಿ ನೇತೃತ್ವದಲ್ಲಿ ಟ್ರೋಫಿಯನ್ನು ಗೆದ್ದುಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>