ಮೊದಲು ಬ್ಯಾಟ್ ಮಾಡಿದ ಭಾರತದ ಮಹೇಂದ್ರ ಸಿಂಗ್ ದೋನಿ ಹೊರತು ಪಡಿಸಿ ಉಳಿದ ಆಟಗಾರರು ರನ್ ಗಳಿಸಲು ಪರದಾಡಿದರು. ಸುರಂಗ ಲಕ್ಮಲ್ 4, ನುವಾನ್ ಪ್ರದೀಪ್ 2 ವಿಕೆಟ್ ಕಬಳಿಸಿ ಭಾರತದ ಬ್ಯಾಟಿಂಗ್ ಬೇಟೆಗೆ ಕಡಿವಾಣ ಹಾಕಿದರು. ಪ್ರಮುಖ ಆಟಗಾರರಾದ ಶಿಖರ್ ಧವನ್, ದಿನೇಶ್ ಕಾರ್ತಿಕ್ ಒಂದೂ ರನ್ ಗಳಿಸದೆ ಪೆವಿಲಿಯನ್ ಸೇರಿದರು. ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ ಎರಡಂಕಿಯ ರನ್ ಹೊಡೆಯಲಿಲ್ಲ. ಇದರಿಂದಾಗಿ ಸವಾಲಿನ ಮೊತ್ತ ಕಲೆಹಾಕುವಲ್ಲಿ ಭಾರತಕ್ಕೆ ಸಾಧ್ಯವಾಗಲಿಲ್ಲ.