<p><strong>ನವದೆಹಲಿ:</strong> ‘ಮುಂಬರುವ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಶೂಟಿಂಗ್ ಸ್ಪರ್ಧೆಯನ್ನು ತೆಗೆದು ಹಾಕಲು ಯೋಜಿಸಿರುವುದು ಸರಿಯಲ್ಲ. ಈ ನಿರ್ಧಾರದಿಂದ ಯುವ ಶೂಟರ್ಗಳಿಗೆ ಹಿನ್ನಡೆ ಉಂಟಾಗಲಿದೆ’ ಎಂದು ಭಾರತದ ಅನುಭವಿ ಶೂಟರ್ ಜಿತು ರಾಯ್ ಹೇಳಿದ್ದಾರೆ.</p>.<p>‘ಈ ಬಾರಿಯ ಕಾಮನ್ವೆಲ್ತ್ನ ಶೂಟಿಂಗ್ ವಿಭಾಗದಲ್ಲಿ ನಾವು ಹೆಚ್ಚು ಪದಕಗಳನ್ನು ಜಯಿಸಿದ್ದೇವೆ. ಯುವ ಶೂಟರ್ಗಳು ಉತ್ತಮ ಸಾಧನೆ ಮಾಡಿದ್ದಾರೆ. ಅವರು 2020ರಲ್ಲಿ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುವ ಕೂಟದಲ್ಲೂ ಪದಕ ಗೆಲ್ಲುವ ಭರವಸೆ ಹೊಂದಿದ್ದಾರೆ. ಶೂಟಿಂಗ್ ಸ್ಪರ್ಧೆಯನ್ನು ತೆಗೆದು ಹಾಕಿದರೆ ಅವರ ಕನಸು ಭಗ್ನವಾಗಲಿದೆ’ ಎಂದಿದ್ದಾರೆ.</p>.<p>ಶೂಟಿಂಗ್ ಸ್ಪರ್ಧೆಯನ್ನು ತೆಗೆದು ಹಾಕಿದರೆ ಭಾರತವು, ಕೂಟದಿಂದಲೇ ಹಿಂದೆ ಸರಿಯಲಿದೆ ಎಂದು ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆಯ (ಎನ್ಆರ್ಎಐ) ಅಧ್ಯಕ್ಷ ರಣಿಂದರ್ ಸಿಂಗ್ ಮಂಗಳವಾರ ಹೇಳಿದ್ದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಜಿತು ‘ರಣಿಂದರ್ ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಅವರ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ. ಶೂಟಿಂಗ್ನಲ್ಲಿ ನಾವು ಮೊದಲಿನಿಂದಲೂ ಹೆಚ್ಚು ಪದಕಗಳನ್ನು ಗೆಲ್ಲುತ್ತಿದ್ದೇವೆ. ಈಗ ಈ ಕ್ರೀಡೆಯನ್ನು ಕೈಬಿಟ್ಟರೆ ಖಂಡಿತವಾಗಿಯೂ ನಿರಾಸೆಯಾಗಲಿದೆ’ ಎಂದು ನುಡಿದಿದ್ದಾರೆ.</p>.<p>‘ಕಾಮನ್ವೆಲ್ತ್ ಆರಂಭಕ್ಕೂ ಮುನ್ನ ಕಠಿಣ ಅಭ್ಯಾಸ ನಡೆಸಿದ್ದೆ. ಹೀಗಾಗಿ 10 ಮೀಟರ್ಸ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನ ಗೆಲ್ಲಲು ಸಾಧ್ಯವಾಯಿತು. ಈ ಸಾಧನೆ ಹೆಮ್ಮೆಯಿಂದ ಬೀಗುವಂತೆ ಮಾಡಿದೆ. ಜೊತೆಗೆ ಮುಂಬರುವ ಕೂಟಗಳಲ್ಲಿ ಶ್ರೇಷ್ಠ ಸಾಮರ್ಥ್ಯ ತೋರಲು ಪ್ರೇರಣೆಯಾಗಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಮುಂಬರುವ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಶೂಟಿಂಗ್ ಸ್ಪರ್ಧೆಯನ್ನು ತೆಗೆದು ಹಾಕಲು ಯೋಜಿಸಿರುವುದು ಸರಿಯಲ್ಲ. ಈ ನಿರ್ಧಾರದಿಂದ ಯುವ ಶೂಟರ್ಗಳಿಗೆ ಹಿನ್ನಡೆ ಉಂಟಾಗಲಿದೆ’ ಎಂದು ಭಾರತದ ಅನುಭವಿ ಶೂಟರ್ ಜಿತು ರಾಯ್ ಹೇಳಿದ್ದಾರೆ.</p>.<p>‘ಈ ಬಾರಿಯ ಕಾಮನ್ವೆಲ್ತ್ನ ಶೂಟಿಂಗ್ ವಿಭಾಗದಲ್ಲಿ ನಾವು ಹೆಚ್ಚು ಪದಕಗಳನ್ನು ಜಯಿಸಿದ್ದೇವೆ. ಯುವ ಶೂಟರ್ಗಳು ಉತ್ತಮ ಸಾಧನೆ ಮಾಡಿದ್ದಾರೆ. ಅವರು 2020ರಲ್ಲಿ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುವ ಕೂಟದಲ್ಲೂ ಪದಕ ಗೆಲ್ಲುವ ಭರವಸೆ ಹೊಂದಿದ್ದಾರೆ. ಶೂಟಿಂಗ್ ಸ್ಪರ್ಧೆಯನ್ನು ತೆಗೆದು ಹಾಕಿದರೆ ಅವರ ಕನಸು ಭಗ್ನವಾಗಲಿದೆ’ ಎಂದಿದ್ದಾರೆ.</p>.<p>ಶೂಟಿಂಗ್ ಸ್ಪರ್ಧೆಯನ್ನು ತೆಗೆದು ಹಾಕಿದರೆ ಭಾರತವು, ಕೂಟದಿಂದಲೇ ಹಿಂದೆ ಸರಿಯಲಿದೆ ಎಂದು ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆಯ (ಎನ್ಆರ್ಎಐ) ಅಧ್ಯಕ್ಷ ರಣಿಂದರ್ ಸಿಂಗ್ ಮಂಗಳವಾರ ಹೇಳಿದ್ದರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಜಿತು ‘ರಣಿಂದರ್ ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಅವರ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ. ಶೂಟಿಂಗ್ನಲ್ಲಿ ನಾವು ಮೊದಲಿನಿಂದಲೂ ಹೆಚ್ಚು ಪದಕಗಳನ್ನು ಗೆಲ್ಲುತ್ತಿದ್ದೇವೆ. ಈಗ ಈ ಕ್ರೀಡೆಯನ್ನು ಕೈಬಿಟ್ಟರೆ ಖಂಡಿತವಾಗಿಯೂ ನಿರಾಸೆಯಾಗಲಿದೆ’ ಎಂದು ನುಡಿದಿದ್ದಾರೆ.</p>.<p>‘ಕಾಮನ್ವೆಲ್ತ್ ಆರಂಭಕ್ಕೂ ಮುನ್ನ ಕಠಿಣ ಅಭ್ಯಾಸ ನಡೆಸಿದ್ದೆ. ಹೀಗಾಗಿ 10 ಮೀಟರ್ಸ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನ ಗೆಲ್ಲಲು ಸಾಧ್ಯವಾಯಿತು. ಈ ಸಾಧನೆ ಹೆಮ್ಮೆಯಿಂದ ಬೀಗುವಂತೆ ಮಾಡಿದೆ. ಜೊತೆಗೆ ಮುಂಬರುವ ಕೂಟಗಳಲ್ಲಿ ಶ್ರೇಷ್ಠ ಸಾಮರ್ಥ್ಯ ತೋರಲು ಪ್ರೇರಣೆಯಾಗಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>