<p><strong>ರಾಂಚಿ (ಐಎಎನ್ಎಸ್):</strong> ಕಳೆದ ತಿಂಗಳು ರಾಂಚಿಯಲ್ಲಿ ಜರುಗಿದ 34ನೇ ರಾಷ್ಟ್ರೀಯ ಕ್ರೀಡಾ ಕೂಟಕ್ಕೆ ಅಗತ್ಯ ಸಾಮಗ್ರಿ ಖರೀದಿ ವ್ಯವಹಾರಗಳಿಗೆ ಸಂಬಂಧಿಸಿದ ಪ್ರಮುಖ ಕಡತಗಳು ಹಾಗೂ ದಾಖಲೆಗಳು ನಾಪತ್ತೆಯಾಗಿವೆ. ಜಾರ್ಖಂಡ್ನ ಜಾಗೃತ ಕೇಂದ್ರದ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಈ ಕಡತ ಮತ್ತು ದಾಖಲೆಗಳು ಕಣ್ಮರೆಯಾಗಿರುವುದು ಕಂಡು ಬಂದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.<br /> <br /> ರಾಂಚಿಯಲ್ಲಿರುವ ರಾಷ್ಟ್ರೀಯ ಕ್ರೀಡಾಕೂಟಗಳ ಸಂಘಟನಾ ಸಮಿತಿಯ ಕಚೇರಿ, ಜಾರ್ಖಂಡ್ ಒಲಿಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹಶ್ಮಿ ಹಾಗೂ ಖಜಾಂಚಿ ಮಧುಕಾಂತ ಪಾಠಕ್ ಅವರ ನಿವಾಸಗಳ ಮೇಲೆ ಮಂಗಳವಾರ ಮತ್ತು ಬುಧವಾರ ನಡೆಸಲಾದ ದಾಳಿಯ ವೇಳೆ ಈ ಅಂಶ ಪತ್ತೆಯಾಗಿದೆ. ‘ಕೆಲವು ಕಡತಗಳಲ್ಲಿ ಹಾಳೆಗಳನ್ನೇ ಕಿತ್ತು ಹಾಕಲಾಗಿದೆ. ಇನ್ನೂ ಕೆಲವು ದಾಖಲೆಗಳು ಮಾಯವಾಗಿವೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಜಾಗೃತ ಕೇಂದ್ರದ ಅಧಿಕಾರಿ ಎಂ.ವಿ.ರಾವ್ ತಿಳಿಸಿದ್ದಾರೆ.<br /> <br /> ಫೆಬ್ರುವರಿಯಲ್ಲಿ ಜರುಗಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಳಸಲಾದ ಸಾಮಗ್ರಿಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಭಾರಿ ನಷ್ಟ ಉಂಟಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ (ಐಎಎನ್ಎಸ್):</strong> ಕಳೆದ ತಿಂಗಳು ರಾಂಚಿಯಲ್ಲಿ ಜರುಗಿದ 34ನೇ ರಾಷ್ಟ್ರೀಯ ಕ್ರೀಡಾ ಕೂಟಕ್ಕೆ ಅಗತ್ಯ ಸಾಮಗ್ರಿ ಖರೀದಿ ವ್ಯವಹಾರಗಳಿಗೆ ಸಂಬಂಧಿಸಿದ ಪ್ರಮುಖ ಕಡತಗಳು ಹಾಗೂ ದಾಖಲೆಗಳು ನಾಪತ್ತೆಯಾಗಿವೆ. ಜಾರ್ಖಂಡ್ನ ಜಾಗೃತ ಕೇಂದ್ರದ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಈ ಕಡತ ಮತ್ತು ದಾಖಲೆಗಳು ಕಣ್ಮರೆಯಾಗಿರುವುದು ಕಂಡು ಬಂದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.<br /> <br /> ರಾಂಚಿಯಲ್ಲಿರುವ ರಾಷ್ಟ್ರೀಯ ಕ್ರೀಡಾಕೂಟಗಳ ಸಂಘಟನಾ ಸಮಿತಿಯ ಕಚೇರಿ, ಜಾರ್ಖಂಡ್ ಒಲಿಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹಶ್ಮಿ ಹಾಗೂ ಖಜಾಂಚಿ ಮಧುಕಾಂತ ಪಾಠಕ್ ಅವರ ನಿವಾಸಗಳ ಮೇಲೆ ಮಂಗಳವಾರ ಮತ್ತು ಬುಧವಾರ ನಡೆಸಲಾದ ದಾಳಿಯ ವೇಳೆ ಈ ಅಂಶ ಪತ್ತೆಯಾಗಿದೆ. ‘ಕೆಲವು ಕಡತಗಳಲ್ಲಿ ಹಾಳೆಗಳನ್ನೇ ಕಿತ್ತು ಹಾಕಲಾಗಿದೆ. ಇನ್ನೂ ಕೆಲವು ದಾಖಲೆಗಳು ಮಾಯವಾಗಿವೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಜಾಗೃತ ಕೇಂದ್ರದ ಅಧಿಕಾರಿ ಎಂ.ವಿ.ರಾವ್ ತಿಳಿಸಿದ್ದಾರೆ.<br /> <br /> ಫೆಬ್ರುವರಿಯಲ್ಲಿ ಜರುಗಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಳಸಲಾದ ಸಾಮಗ್ರಿಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಭಾರಿ ನಷ್ಟ ಉಂಟಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>