<p><strong>ಕೊಲಂಬೊ (ಪಿಟಿಐ): </strong>ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆದ ಶ್ರೀಲಂಕಾ ತಂಡದವರು ಭಾನು ವಾರ ತವರಿಗೆ ಬಂದರು. ಕೊಲಂಬೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.<br /> <br /> ಮ್ಯಾಥ್ಯೂಸ್ ಬಳಗದ ಆಟಗಾರರನ್ನು ವಿಮಾನ ನಿಲ್ದಾಣದಿಂದ ತೆರೆದ ಬಸ್ನಲ್ಲಿ ಮೆರವಣಿಗೆ ಮೂಲಕ ಲಂಕಾ ಕ್ರಿಕೆಟ್ ಮಂಡಳಿಯ ಕಚೇರಿಗೆ ಕರೆತರಲಾಯಿತು. ಆಟಗಾರರನ್ನು ನೋಡಲು ರಸ್ತೆಯ ಎರಡೂ ಬದಿಗಳಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು.<br /> ಮೀರ್ಪುರದಲ್ಲಿ ಶನಿವಾರ ನಡೆದ ಫೈನಲ್ನಲ್ಲಿ ಲಂಕಾ ತಂಡ ಪಾಕಿಸ್ತಾನ ತಂಡವನ್ನು ಐದು ವಿಕೆಟ್ಗಳಿಂದ ಮಣಿಸಿ ಚಾಂಪಿಯನ್ ಆಗಿತ್ತು.<br /> <br /> ಎಲ್ಲ ಆಟಗಾರರ ಕಠಿಣ ಪ್ರಯತ್ನದಿಂದ ಏಷ್ಯಾಕಪ್ ಗೆಲ್ಲಲು ಸಾಧ್ಯವಾಯಿತು ಎಂದು ನಾಯಕ ಮ್ಯಾಥ್ಯೂಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶ್ರೀಲಂಕಾ ಕ್ರಿಕೆಟ್ ಮಂಡಳಿ (ಎಸ್ಎಲ್ಸಿ) ಮತ್ತು ಆಟಗಾರರ ನಡುವಿನ ಬಿಕ್ಕಟ್ಟು ಬಗೆಹರಿಯ ಬಹುದು ಎಂಬ ವಿಶ್ವಾಸವನ್ನು ಮ್ಯಾಥ್ಯೂಸ್ ವ್ಯಕ್ತಪಡಿಸಿದರು.<br /> <br /> ‘ಹೌದು. ಎಸ್ಎಲ್ಸಿ ಜೊತೆ ನಮಗೆ ಭಿನ್ನಾಭಿಪ್ರಾಯ ಇದೆ. ಮಂಡಳಿಯ ಒಪ್ಪಂದಕ್ಕೆ ನಾವು ಸಹಿ ಹಾಕಿಲ್ಲ. ಸದ್ಯದಲ್ಲೇ ಈ ಬಿಕ್ಕಟ್ಟು ಬಗೆಹರಿಯಬಹುದೆಂಬ ವಿಶ್ವಾಸ ನನ್ನದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ (ಪಿಟಿಐ): </strong>ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆದ ಶ್ರೀಲಂಕಾ ತಂಡದವರು ಭಾನು ವಾರ ತವರಿಗೆ ಬಂದರು. ಕೊಲಂಬೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಲಾಯಿತು.<br /> <br /> ಮ್ಯಾಥ್ಯೂಸ್ ಬಳಗದ ಆಟಗಾರರನ್ನು ವಿಮಾನ ನಿಲ್ದಾಣದಿಂದ ತೆರೆದ ಬಸ್ನಲ್ಲಿ ಮೆರವಣಿಗೆ ಮೂಲಕ ಲಂಕಾ ಕ್ರಿಕೆಟ್ ಮಂಡಳಿಯ ಕಚೇರಿಗೆ ಕರೆತರಲಾಯಿತು. ಆಟಗಾರರನ್ನು ನೋಡಲು ರಸ್ತೆಯ ಎರಡೂ ಬದಿಗಳಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು.<br /> ಮೀರ್ಪುರದಲ್ಲಿ ಶನಿವಾರ ನಡೆದ ಫೈನಲ್ನಲ್ಲಿ ಲಂಕಾ ತಂಡ ಪಾಕಿಸ್ತಾನ ತಂಡವನ್ನು ಐದು ವಿಕೆಟ್ಗಳಿಂದ ಮಣಿಸಿ ಚಾಂಪಿಯನ್ ಆಗಿತ್ತು.<br /> <br /> ಎಲ್ಲ ಆಟಗಾರರ ಕಠಿಣ ಪ್ರಯತ್ನದಿಂದ ಏಷ್ಯಾಕಪ್ ಗೆಲ್ಲಲು ಸಾಧ್ಯವಾಯಿತು ಎಂದು ನಾಯಕ ಮ್ಯಾಥ್ಯೂಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶ್ರೀಲಂಕಾ ಕ್ರಿಕೆಟ್ ಮಂಡಳಿ (ಎಸ್ಎಲ್ಸಿ) ಮತ್ತು ಆಟಗಾರರ ನಡುವಿನ ಬಿಕ್ಕಟ್ಟು ಬಗೆಹರಿಯ ಬಹುದು ಎಂಬ ವಿಶ್ವಾಸವನ್ನು ಮ್ಯಾಥ್ಯೂಸ್ ವ್ಯಕ್ತಪಡಿಸಿದರು.<br /> <br /> ‘ಹೌದು. ಎಸ್ಎಲ್ಸಿ ಜೊತೆ ನಮಗೆ ಭಿನ್ನಾಭಿಪ್ರಾಯ ಇದೆ. ಮಂಡಳಿಯ ಒಪ್ಪಂದಕ್ಕೆ ನಾವು ಸಹಿ ಹಾಕಿಲ್ಲ. ಸದ್ಯದಲ್ಲೇ ಈ ಬಿಕ್ಕಟ್ಟು ಬಗೆಹರಿಯಬಹುದೆಂಬ ವಿಶ್ವಾಸ ನನ್ನದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>