ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯ ಬ್ಯಾಂಕ್‌ ತಂಡಕ್ಕೆ ಜಯ

Last Updated 7 ಅಕ್ಟೋಬರ್ 2015, 19:59 IST
ಅಕ್ಷರ ಗಾತ್ರ

ಬೆಂಗಳೂರು: ಅರವಿಂದ್‌ ಆರ್ಮುಗಂ ಮತ್ತು ರಾಜೇಶ್‌ ಉಪ್ಪಾರ ಅವರ ಉತ್ತಮ ಆಟದ ನೆರವಿನಿಂದ ವಿಜಯ ಬ್ಯಾಂಕ್‌ ತಂಡದವರು ಬುಧವಾರ ಆರಂಭವಾದ ಮುಲ್ಕಿ ಸುಂದರ್‌ ರಾಮ ಶೆಟ್ಟಿ ಸ್ಮಾರಕ ಅಖಿಲ ಭಾರತ ಬ್ಯಾಸ್ಕೆಟ್‌ ಬಾಲ್‌ ಟೂರ್ನಿಯ ಪಂದ್ಯದಲ್ಲಿ ಗೆದ್ದಿದ್ದಾರೆ.

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ‘ಬಿ’ ಗುಂಪಿನ ಪಂದ್ಯ ದಲ್ಲಿ ವಿಜಯ ಬ್ಯಾಂಕ್‌ 70–57ರಲ್ಲಿ ಸೌತ್‌ ಸೆಂಟ್ರಲ್‌ ರೈಲ್ವೆ ತಂಡವನ್ನು ಮಣಿಸಿತು. ವಿಜಯಿ ತಂಡದ ಅರವಿಂದ್‌ (22 ಪಾಯಿಂಟ್ಸ್‌), ಅನಿಲ್‌ (17) ಮತ್ತು ರಾಜೇಶ್‌ (16) ಮಿಂಚಿದರು. ‘ಎ’ ಗುಂಪಿನ ಪಂದ್ಯದಲ್ಲಿ  ಇನ್‌ಕಮ್‌ ಟ್ಯಾಕ್ಸ್‌ ಚೆನ್ನೈ ತಂಡ 77–65ರಲ್ಲಿ ಒಎನ್‌ಜಿಸಿ ಡೆಹ್ರಾಡೂನ್‌ ತಂಡವನ್ನು ಪರಾಭವಗೊಳಿಸಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT