ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿನ್‌ ಪರ ರವಿಶಾಸ್ತ್ರಿ ಬ್ಯಾಟಿಂಗ್‌: ತಂಡದ ಸಲಹೆಗಾರರನ್ನಾಗಿ ಸಚಿನ್‌ ನೇಮಿಸಿಕೊಳ್ಳಲು ಸಲಹೆ

Last Updated 19 ಜುಲೈ 2017, 11:02 IST
ಅಕ್ಷರ ಗಾತ್ರ

ನವದೆಹಲಿ: ಸಚಿನ್‌ ತೆಂಡೂಲ್ಕರ್‌ ಅವರನ್ನು ಭಾರತ ಕ್ರಿಕೆಟ್‌ ತಂಡದ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವಂತೆ ತಂಡದ ಮುಖ್ಯ ಕೋಚ್‌ ರವಿಶಾಸ್ತ್ರಿ ಹೇಳಿದ್ದಾರೆ.

ಮಂಗಳವಾರ ನಡೆದ ಬಿಸಿಸಿಐನ ವಿಶೇಷ ಸಮಿತಿಯ ಸಭೆಯಲ್ಲಿ ರವಿಶಾಸ್ತ್ರಿ ತಮ್ಮ ಮನದಿಚ್ಛೆಯನ್ನು ಹೇಳಿಕೊಂಡಿದ್ದಾರೆ.

ಆದರೆ, ರವಿಶಾಸ್ತ್ರಿ ಅವರ ಇಚ್ಛೆಯು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಬಿಸಿಸಿಐನ ವಿಶೇಷ ಸಮಿತಿ ತಿಳಿಸಿದೆ.

‘ಸಚಿನ್‌ ಅವರನ್ನು ತಂಡದ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವುದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗಬಹುದು ಎಂಬುದನ್ನು ರವಿಶಾಸ್ತ್ರಿ ಅವರ ಗಮಕ್ಕೆ ತಂದಿದ್ದೇವೆ’ ಎಂದು ವಿಶೇಷ ಸಮಿತಿಯ ಹೆಸರು ಹೇಳಲಿಚ್ಛಿಸದ ಸದಸ್ಯರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT