<p><strong>ನವದೆಹಲಿ: </strong>ಸಿಂಗಲ್ಸ್ ವಿಭಾಗದ ಭರವಸೆ ಎನಿಸಿರುವ ಸೈನಾ ನೆಹ್ವಾಲ್, ಪಿ.ವಿ. ಸಿಂಧು ಮತ್ತು ಪರುಪಳ್ಳಿ ಕಶ್ಯಪ್ ಅವರು ಮಂಗಳವಾರ ಇಲ್ಲಿ ಆರಂಭವಾಗಲಿರುವ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸವಾಲನ್ನು ಮುನ್ನಡೆಸಲಿದ್ದಾರೆ.<br /> <br /> ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಪರ್ಧಿಗಳು ಇತ್ತೀಚಿಗೆ ಅಮೋಘ ಪ್ರದರ್ಶನ ತೋರುತ್ತಿ ದ್ದಾರೆ. ಆದ್ದರಿಂದ ಆತಿಥೇಯ ರಾಷ್ಟ್ರದ ಸ್ಪರ್ಧಿಗಳ ಮೇಲೆ ಭರವಸೆ ಹೆಚ್ಚಿದೆ. ಸಿರಿ ಫೋರ್ಟ್ ಕ್ರೀಡಾ ಸಂಕೀರ್ಣದಲ್ಲಿ ಪಂದ್ಯಗಳು ನಡೆಯ ಲಿವೆ. 2010ರಲ್ಲಿ ಇಲ್ಲಿ ಪ್ರಶಸ್ತಿ ಜಯಿಸಿದ್ದ ಸೈನಾ ಈ ಬಾರಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.<br /> <br /> ಈ ಬಾರಿಯ ಟೂರ್ನಿಯ ಬಹುಮಾನ ಮೊತ್ತ ಹೆಚ್ಚಳ ಮಾಡ ಲಾಗಿದೆ. ಮೊದಲು ₨ 1.2 ಕೋಟಿ ಯಿಂದ ₨ 1.5 ಕೋಟಿಗೆ ಹೆಚ್ಚಿಸಲಾಗಿದೆ. ‘ಗಾಯದಿಂದ ಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಇಲ್ಲಿ ಉತ್ತಮ ಪ್ರದರ್ಶನ ತೋರುತ್ತೇನೆ’ ಎಂದು ವಿಶ್ವ ಕ್ರಮಾಂಕದಲ್ಲಿ ಎಂಟನೇ ಸ್ಥಾನ ಹೊಂದಿರುವ ಹೈದರಾಬಾದ್ನ ಸೈನಾ ನುಡಿದರು.<br /> <br /> ಪುರುಷರ ವಿಭಾಗದ ಸಿಂಗಲ್ಸ್ನಲ್ಲಿ ಕೆ. ಶ್ರೀಕಾಂತ್, ಸೌರಭ್ ವರ್ಮಾ, ಎಚ್.ಎಸ್. ಪ್ರಣಯ್, ಬೆಂಗಳೂರಿನ ಅರವಿಂದ್ ಭಟ್ ಅವರು ಟೂರ್ನಿಯಲ್ಲಿ ಪಾಲ್ಗೊಂಡಿರುವ ಭಾರತದ ಪ್ರಮುಖ ಸ್ಪರ್ಧಿಗಳು. ಡಬಲ್ಸ್ನಲ್ಲಿ ಅಶ್ವಿನಿ ಪೊನ್ನಪ್ಪ ಕಣಕ್ಕಿಳಿಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸಿಂಗಲ್ಸ್ ವಿಭಾಗದ ಭರವಸೆ ಎನಿಸಿರುವ ಸೈನಾ ನೆಹ್ವಾಲ್, ಪಿ.ವಿ. ಸಿಂಧು ಮತ್ತು ಪರುಪಳ್ಳಿ ಕಶ್ಯಪ್ ಅವರು ಮಂಗಳವಾರ ಇಲ್ಲಿ ಆರಂಭವಾಗಲಿರುವ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸವಾಲನ್ನು ಮುನ್ನಡೆಸಲಿದ್ದಾರೆ.<br /> <br /> ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಪರ್ಧಿಗಳು ಇತ್ತೀಚಿಗೆ ಅಮೋಘ ಪ್ರದರ್ಶನ ತೋರುತ್ತಿ ದ್ದಾರೆ. ಆದ್ದರಿಂದ ಆತಿಥೇಯ ರಾಷ್ಟ್ರದ ಸ್ಪರ್ಧಿಗಳ ಮೇಲೆ ಭರವಸೆ ಹೆಚ್ಚಿದೆ. ಸಿರಿ ಫೋರ್ಟ್ ಕ್ರೀಡಾ ಸಂಕೀರ್ಣದಲ್ಲಿ ಪಂದ್ಯಗಳು ನಡೆಯ ಲಿವೆ. 2010ರಲ್ಲಿ ಇಲ್ಲಿ ಪ್ರಶಸ್ತಿ ಜಯಿಸಿದ್ದ ಸೈನಾ ಈ ಬಾರಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.<br /> <br /> ಈ ಬಾರಿಯ ಟೂರ್ನಿಯ ಬಹುಮಾನ ಮೊತ್ತ ಹೆಚ್ಚಳ ಮಾಡ ಲಾಗಿದೆ. ಮೊದಲು ₨ 1.2 ಕೋಟಿ ಯಿಂದ ₨ 1.5 ಕೋಟಿಗೆ ಹೆಚ್ಚಿಸಲಾಗಿದೆ. ‘ಗಾಯದಿಂದ ಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಇಲ್ಲಿ ಉತ್ತಮ ಪ್ರದರ್ಶನ ತೋರುತ್ತೇನೆ’ ಎಂದು ವಿಶ್ವ ಕ್ರಮಾಂಕದಲ್ಲಿ ಎಂಟನೇ ಸ್ಥಾನ ಹೊಂದಿರುವ ಹೈದರಾಬಾದ್ನ ಸೈನಾ ನುಡಿದರು.<br /> <br /> ಪುರುಷರ ವಿಭಾಗದ ಸಿಂಗಲ್ಸ್ನಲ್ಲಿ ಕೆ. ಶ್ರೀಕಾಂತ್, ಸೌರಭ್ ವರ್ಮಾ, ಎಚ್.ಎಸ್. ಪ್ರಣಯ್, ಬೆಂಗಳೂರಿನ ಅರವಿಂದ್ ಭಟ್ ಅವರು ಟೂರ್ನಿಯಲ್ಲಿ ಪಾಲ್ಗೊಂಡಿರುವ ಭಾರತದ ಪ್ರಮುಖ ಸ್ಪರ್ಧಿಗಳು. ಡಬಲ್ಸ್ನಲ್ಲಿ ಅಶ್ವಿನಿ ಪೊನ್ನಪ್ಪ ಕಣಕ್ಕಿಳಿಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>