ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಉತ್ತೀರ್ಣ ವಿಧಾನದ ಬದಲು ಬೇರೆ ಮಾದರಿ ಅನುಸರಿಸಲು ಎಬಿವಿಪಿ ಸಲಹೆ

ಪರೀಕ್ಷಾ ವಿಧಾನದ ಗೊಂದಲಕ್ಕೆ ಸಂಬಂಧಿಸಿದಂತೆ ಎಬಿವಿಪಿ ಹೇಳಿಕೆ
Last Updated 21 ಮೇ 2020, 15:39 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ನಿಂದ ಶಿಕ್ಷಣ ವಲಯದಲ್ಲಿ ಪರೀಕ್ಷೆಗಳ ಕುರಿತು ಸಾಕಷ್ಟು ಗೊಂದಲ ಸೃಷ್ಟಿಯಾಗಿದೆ. ಸಾಮೂಹಿಕವಾಗಿ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಸಾಮೂಹಿಕವಾಗಿ ಉತ್ತೀರ್ಣ ಮಾಡುವ ಬದಲು, ಪರ್ಯಾಯ ಪರೀಕ್ಷಾ ವಿಧಾನಗಳನ್ನು ಸರ್ಕಾರ ಅನುಸರಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಹೇಳಿದೆ.

‘ಎಬಿವಿಪಿಯು ದೂರವಾಣಿ ಕರೆ ಮಾಡುವ ಮೂಲಕ 8.68 ಲಕ್ಷ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಿದೆ. ಸಾಮೂಹಿಕ ಉತ್ತೀರ್ಣದ ಬದಲು, ಕ್ಯಾರಿ ಓವರ್‌ ಪದ್ಧತಿ, ಓಪನ್ ಬುಕ್‌ ಪರೀಕ್ಷೆ, ವರದಿ ಮತ್ತು ಗೃಹ ಕಾರ್ಯ (ಅಸೈನ್‌ಮೆಂಟ್‌)ವನ್ನು ಪರಿಗಣಿಸಿ, ಸೂಕ್ತ ಅಂಕಗಳನ್ನು ನೀಡಿ ಉತ್ತೀರ್ಣ ಮಾಡಬೇಕು ಎಂಬ ಅಭಿಪ್ರಾಯವನ್ನು ಈ ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ’ ಎಂದು ಎಬಿವಿಪಿ ಹೇಳಿದೆ.

‘ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೆಲವು ವಿಶ್ವವಿದ್ಯಾಲಯಗಳು ಬೇರೆ ಬೇರೆ ರೀತಿ ನಿರ್ಧಾರ ತೆಗೆದುಕೊಳ್ಳುತ್ತಿವೆ. ಯಾವುದೇ ನಿರ್ಧಾರ ತೆಗೆದುಕೊಳ್ಳಲು ವಿಶ್ವವಿದ್ಯಾಲಯಗಳು ಸ್ವತಂತ್ರವಾಗಿವೆ. ಆದರೆ, ಎಷ್ಟೋ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಅಗತ್ಯ ಸೌಲಭ್ಯಗಳು ಇರುವುದಿಲ್ಲ. ಅಲ್ಲದೆ, ಯಾವುದೇ ಪದ್ಧತಿಯು, ದೀರ್ಘಾವಧಿಯಲ್ಲಿ ಯಾವುದೇ ಒಬ್ಬ ವಿದ್ಯಾರ್ಥಿಯ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಬಾರದು ಎಂಬ ಕಾಳಜಿ ನಮ್ಮದು’ ಎಂದು ಅದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT