<p><strong>ಮೈಸೂರು:</strong> ‘ಅನೇಕ ಟಿ.ವಿ.ಮಾಧ್ಯಮಗಳು ಮುಂಜಾನೆಯೇ ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತವಾಗಿವೆ. ಗುರುವಾಗಲು ಯೋಗ್ಯತೆ ಇಲ್ಲದವನನ್ನು ಕೂರಿಸಿ ಮೌಢ್ಯ ಬಿತ್ತುತ್ತಿವೆ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಕಿಡಿಕಾರಿದರು.</p>.<p>ನಗರದಲ್ಲಿ ಸಹಮತ ವೇದಿಕೆಯಿಂದ ‘ಮತ್ತೆ ಕಲ್ಯಾಣ’ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಕಲಾಮಂದಿರದಲ್ಲಿ ನಡೆದ ಕಾಲೇಜು ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಸ್ವಾಮೀಜಿ, 'ಶಾಸ್ತ್ರ, ಜ್ಯೋತಿಷದ ಹೆಸರಿನಲ್ಲಿ ಮುಂಜಾನೆಯೇ ಮೆದುಳು ತಿನ್ನುವಿಕೆ ಶುರುವಾಗುತ್ತಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>'ವ್ಯವಹಾರಿಕ, ಅಧ್ಯಾತ್ಮ, ನೈತಿಕ ಶಿಕ್ಷಣ ಇಂದು ಮಕ್ಕಳಿಗೆ ಸಿಗದಾಗಿದೆ. ದೋಚುವುದು–ಬಾಚುವುದನ್ನೇ ಇಂದಿನ ಶಿಕ್ಷಣ ಕಲಿಸುತ್ತಿದೆ. ಅರಿವು ನೀಡುವುದು, ಕೊಳೆ ತೊಳೆಯುವುದು ಶಿಕ್ಷಣದ ಮೂಲ ಮಂತ್ರವಾಗಬೇಕಿದೆ. ಆಚಾರ–ವಿಚಾರ ಕ್ರಾಂತಿ ಬದುಕಿಗೆ ಬೆಳಕಾಗಬೇಕಿದೆ. ನಡೆ–ನುಡಿ ಸಿದ್ಧಾಂತಗಳು ಆದರ್ಶವಾಗಬೇಕಿವೆ' ಎಂದರು.</p>.<p>'ಪ್ರತಿಭಟಿಸುವುದು ಸುಲಭದ ಕೆಲಸ. ಮನಸ್ಸು ಕಟ್ಟುವುದು ಕಷ್ಟದ ಕಾರ್ಯ. ಬಡತನ, ಭ್ರಷ್ಟಾಚಾರ, ಜಾತೀಯತೆ, ಲಿಂಗ ತಾರತಮ್ಯ ಇಂದಿಗೂ ಜೀವಂತವಾಗಿದ್ದು, ಇವನ್ನು ಹೋಗಲಾಡಿಸುವವರು ಯಾರು? ಸಮ ಸಮಾಜ ನಿರ್ಮಾಣಕ್ಕಾಗಿ ಮತ್ತೆ ಕಲ್ಯಾಣ ಆರಂಭಿಸಲಾಗಿದೆ' ಎಂದು ಸ್ವಾಮೀಜಿ ತಿಳಿಸಿದರು.</p>.<p>ವಿದ್ಯಾರ್ಥಿಗಳಾದ ವಿಜಯಕುಮಾರ್, ಉದಯ್ಕುಮಾರ್, ಶೃಂಗ, ಪುಟ್ಟಸ್ವಾಮಿ, ಅಂಬಿಕಾ, ಅಕ್ಷತಾ ಬಿ.ಕೆ. ಅರ್ಚನಾ ಜೆ, ರಕ್ಷಿತಾ, ಅಂಕಿತಾ ಸಂವಾದದಲ್ಲಿ ಪ್ರಶ್ನಿಸಿದರು. ಪಂಡಿತಾರಾಧ್ಯ ಸ್ವಾಮೀಜಿ, ಪ್ರೊ.ಮೊರಬದ ಮಲ್ಲಿಕಾರ್ಜುನ, ಎಚ್.ಜನಾರ್ಧನ್ ಉತ್ತರಿಸಿದರು. ಕೆ.ಎಸ್.ಶಿವರಾಮು, ಜವರಪ್ಪ, ಮಹದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಅನೇಕ ಟಿ.ವಿ.ಮಾಧ್ಯಮಗಳು ಮುಂಜಾನೆಯೇ ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತವಾಗಿವೆ. ಗುರುವಾಗಲು ಯೋಗ್ಯತೆ ಇಲ್ಲದವನನ್ನು ಕೂರಿಸಿ ಮೌಢ್ಯ ಬಿತ್ತುತ್ತಿವೆ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಕಿಡಿಕಾರಿದರು.</p>.<p>ನಗರದಲ್ಲಿ ಸಹಮತ ವೇದಿಕೆಯಿಂದ ‘ಮತ್ತೆ ಕಲ್ಯಾಣ’ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಕಲಾಮಂದಿರದಲ್ಲಿ ನಡೆದ ಕಾಲೇಜು ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಸ್ವಾಮೀಜಿ, 'ಶಾಸ್ತ್ರ, ಜ್ಯೋತಿಷದ ಹೆಸರಿನಲ್ಲಿ ಮುಂಜಾನೆಯೇ ಮೆದುಳು ತಿನ್ನುವಿಕೆ ಶುರುವಾಗುತ್ತಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>'ವ್ಯವಹಾರಿಕ, ಅಧ್ಯಾತ್ಮ, ನೈತಿಕ ಶಿಕ್ಷಣ ಇಂದು ಮಕ್ಕಳಿಗೆ ಸಿಗದಾಗಿದೆ. ದೋಚುವುದು–ಬಾಚುವುದನ್ನೇ ಇಂದಿನ ಶಿಕ್ಷಣ ಕಲಿಸುತ್ತಿದೆ. ಅರಿವು ನೀಡುವುದು, ಕೊಳೆ ತೊಳೆಯುವುದು ಶಿಕ್ಷಣದ ಮೂಲ ಮಂತ್ರವಾಗಬೇಕಿದೆ. ಆಚಾರ–ವಿಚಾರ ಕ್ರಾಂತಿ ಬದುಕಿಗೆ ಬೆಳಕಾಗಬೇಕಿದೆ. ನಡೆ–ನುಡಿ ಸಿದ್ಧಾಂತಗಳು ಆದರ್ಶವಾಗಬೇಕಿವೆ' ಎಂದರು.</p>.<p>'ಪ್ರತಿಭಟಿಸುವುದು ಸುಲಭದ ಕೆಲಸ. ಮನಸ್ಸು ಕಟ್ಟುವುದು ಕಷ್ಟದ ಕಾರ್ಯ. ಬಡತನ, ಭ್ರಷ್ಟಾಚಾರ, ಜಾತೀಯತೆ, ಲಿಂಗ ತಾರತಮ್ಯ ಇಂದಿಗೂ ಜೀವಂತವಾಗಿದ್ದು, ಇವನ್ನು ಹೋಗಲಾಡಿಸುವವರು ಯಾರು? ಸಮ ಸಮಾಜ ನಿರ್ಮಾಣಕ್ಕಾಗಿ ಮತ್ತೆ ಕಲ್ಯಾಣ ಆರಂಭಿಸಲಾಗಿದೆ' ಎಂದು ಸ್ವಾಮೀಜಿ ತಿಳಿಸಿದರು.</p>.<p>ವಿದ್ಯಾರ್ಥಿಗಳಾದ ವಿಜಯಕುಮಾರ್, ಉದಯ್ಕುಮಾರ್, ಶೃಂಗ, ಪುಟ್ಟಸ್ವಾಮಿ, ಅಂಬಿಕಾ, ಅಕ್ಷತಾ ಬಿ.ಕೆ. ಅರ್ಚನಾ ಜೆ, ರಕ್ಷಿತಾ, ಅಂಕಿತಾ ಸಂವಾದದಲ್ಲಿ ಪ್ರಶ್ನಿಸಿದರು. ಪಂಡಿತಾರಾಧ್ಯ ಸ್ವಾಮೀಜಿ, ಪ್ರೊ.ಮೊರಬದ ಮಲ್ಲಿಕಾರ್ಜುನ, ಎಚ್.ಜನಾರ್ಧನ್ ಉತ್ತರಿಸಿದರು. ಕೆ.ಎಸ್.ಶಿವರಾಮು, ಜವರಪ್ಪ, ಮಹದೇವಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>