‘90 ದಿನಗಳ ಅವಧಿ ಮುಗಿದ ನಂತರವೂ ಹೆಚ್ಚುವರಿಯಾಗಿ ಇನ್ನೂ ಒಂದು ವಾರ ಹಣ ಪಡೆಯದೆ ಮೋಡ ಬಿತ್ತನೆ ಮಾಡಲು ಗುತ್ತಿಗೆ ಪಡೆದ ಸಂಸ್ಥೆ ಒಪ್ಪಿಕೊಂಡಿತ್ತು. ಮೋಡ ಬಿತ್ತನೆಯಿಂದ ಹೆಚ್ಚುವರಿಯಾಗಿ ಮಳೆಯಾಗಿದ್ದು, ಇನ್ನೂ ಸಮರ್ಪಕವಾಗಿ ಮಳೆಯಾಗದ ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಈ ಕಾರ್ಯ ನಡೆಯಬೇಕಿದೆ. ಈ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಡಲಾಗುವುದು. ನಂತರ ಕಾರ್ಯಾಚರಣೆ ನಡೆಯಬೇಕೆ? ಬೇಡವೆ? ಎಂಬುದು ನಿರ್ಧಾರವಾಗಲಿದೆ’ ಮೂಲಗಳು ತಿಳಿಸಿವೆ.