ಬೆಂಗಳೂರು: ಭಾರತ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದ ವತಿಯಿಂದಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 11ತಿಂಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆಉಚಿತ ತರಬೇತಿ ನೀಡಲಾಗುವುದು.
ತರಗತಿಗಳು ಜುಲೈ 1ರಿಂದ ಆರಂಭವಾಗಲಿವೆ.ವಿದ್ಯಾರ್ಥಿಗಳಿಗೆ ₹1 ಸಾವಿರ ಮೌಲ್ಯದ ಪುಸ್ತಕ ಹಾಗೂ ತಿಂಗಳು ₹1ಸಾವಿರ ಸ್ಟೈಪೆಂಡ್ ನೀಡಲಾಗುವುದು.
ಆಸಕ್ತರು ತಮ್ಮ ಎಸ್ಸೆಸ್ಸೆಲ್ಸಿ, ಪಿಯುಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಪ್ರತಿಗಳನ್ನು ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ವಿದ್ಯಾರ್ಹತೆ: ಅಂಗೀಕೃತ ಕಾಲೇಜಿನಿಂದ ಪಿಯುಸಿ ಅಥವಾ ತತ್ಸಮಾನ ಪದವಿ.
ವಿಳಾಸ: ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ, ಉದ್ಯೋಗ ಮಹಾನಿರ್ದೇಶನಾಲಯದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ, ಕೌಶಲ ಭವನ ಹಿಂಭಾಗ, ಸರ್ಕಾರಿ ಕೈಗಾರಿಕೆ ತರಬೇತಿ ಕೇಂದ್ರದ ಆವರಣ, ಡೇರಿ ವೃತ್ತ, ಬೆಂಗಳೂರು–29.