ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಸಂತ್ರಸ್ತರಿಗೆ 10 ಸಾವಿರ ಬೆಡ್‌ಶೀಟ್‌

Last Updated 9 ಆಗಸ್ಟ್ 2019, 19:36 IST
ಅಕ್ಷರ ಗಾತ್ರ

ಬೆಂಗಳೂರು: ಪ್ರವಾಹ ಸಂತ್ರಸ್ತ ಉತ್ತರ ಕರ್ನಾಟಕದ ಭಾಗಕ್ಕೆ ನೈರುತ್ಯ ರೈಲ್ವೆ ಮಹಿಳಾ ಕಲ್ಯಾಣ ವೇದಿಕೆ ಮತ್ತು ಬೆಂಗಳೂರು ರೈಲ್ವೆ ವಿಭಾಗದಿಂದ 3 ಸಾವಿರ ಹೊದಿಕೆ ಮತ್ತು 10 ಸಾವಿರ ಬೆಡ್‌ಶೀಟ್‌ಗಳನ್ನು ಶುಕ್ರವಾರ ಕಳುಹಿಸಲಾಯಿತು.

ಕುಡಿಯುವ ನೀರು, ಬಿಸ್ಕೇಟ್, ಟೀ ಪುಡಿ, ಹಾಲಿನ ಪುಡಿ, ಸಾಬೂನು, ಟೂತ್ ಪೇಸ್ಟ್, ಟೂತ್ ಬ್ರಷ್ ಮತ್ತು ಔಷಧಗಳನ್ನು ರೈಲಿನಲ್ಲಿ ಹುಬ್ಬಳ್ಳಿಗೆ ಕಳುಹಿಸಿತು. ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕರು ಮತ್ತು ರೈಲ್ವೆ ನೌಕರರಿಂದ ರೈಲ್ವೆ ವಿಭಾಗದ ಸ್ಕೌಟ್ ಆ್ಯಂಡ್ ಗೈಡ್ಸ್‌ ವಿದ್ಯಾರ್ಥಿಗಳು ₹63,700 ಸಂಗ್ರಹಿಸಿದರು.

₹15 ಲಕ್ಷ ನೆರವು ನೀಡಿದ ಪೇಜಾವರ ಮಠ

ಮೈಸೂರು: ರಾಜ್ಯದ ವಿವಿಧೆಡೆ ನೆರೆ ಪರಿಸ್ಥಿತಿಯಿಂದ ಸಂತ್ರಸ್ತರಾದವರಿಗೆ ಉಡುಪಿ ಪೇಜಾವರ ಮಠದಿಂದ ₹ 15 ಲಕ್ಷ ನೆರವು ನೀಡಲಾಗುವುದು ಎಂದು ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.

ಧಾರಾಕಾರ ಮಳೆ ಹಾಗೂ ನೆರೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಂತ್ರಸ್ತರ ನೆರವಿಗೆ ಎಲ್ಲರೂ ಸಹಾಯಹಸ್ತ ಚಾಚಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT