ಬೆಂಗಳೂರು ನಗರದ ಬಾಣಸವಾಡಿ, ಮಡಿವಾಳ, ಎಚ್ಎಸ್ಆರ್ ಲೇಔಟ್, ಅಮೃತಹಳ್ಳಿ ಠಾಣೆ ವ್ಯಾಪ್ತಿಗಳಲ್ಲಿ ಮಾಡಿದ್ದ ಕಳವು ಪ್ರಕರಣಗಳಲ್ಲಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮತ್ತು ಆನೇಕಲ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಜೊತೆಗೆ ಕಳವು ಮಾಡಿದ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಟವೇರಾ ಕಾರು ವಶಪಡಿಸಿಕೊಳ್ಳಲಾಗಿದೆ. ಇತರ ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದರು.