ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಕಾಲೀನ ಸಮಸ್ಯೆ ಅರಿತು ಕವಿತೆ ರಚಿಸಿ: ಸಾಹಿತಿ ಎಚ್.ದಂಡಪ್ಪ

Last Updated 26 ಅಕ್ಟೋಬರ್ 2018, 19:29 IST
ಅಕ್ಷರ ಗಾತ್ರ

ಬೆಂಗಳೂರು: ಸಮಕಾಲೀನ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿಕೊಂಡು ಪರಿಣಾಮಕಾರಿಯಾಗಿ ಕವಿತೆಗಳನ್ನು ರಚಿಸಬೇಕು ಎಂದುವಿಮರ್ಶಕ ಹಾಗೂ ಸಾಹಿತಿ ಎಚ್.ದಂಡಪ್ಪ ಹೇಳಿದರು.

ಬೆಂಗಳೂರು ನಗರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಕ್ಷಾತ್ಕಾರ ಚಾರಿಟಬಲ್ ಸೊಸೈಟಿ ಆಶ್ರಯದಲ್ಲಿ ಪಾಪರೆಡ್ಡಿಪಾಳ್ಯದ ಕಿತ್ತೂರು ರಾಣಿ ಚನ್ನಮ್ಮ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಚುಟುಕು ಕವಿತೆ ರಚಿಸುವ ಜತೆಗೆ ದೀರ್ಘ ಕವಿತೆಗಳನ್ನು ರಚಿಸುವ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳಬೇಕು. ಕವಿತೆ ಬರೆಯುವುದು ತಮಾಷೆಗಲ್ಲ. ಜ್ಞಾನದ ವಿಸ್ತಾರಕ್ಕಾಗಿ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಪಾಲಿಕೆ ಸದಸ್ಯ ಜಿ.ಮೋಹನ್‍ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT