ಬೆಂಗಳೂರು: ಮಕ್ಕಳ ಪಾಲಕರು ತಮಗಿಷ್ಟವಾದ ಕ್ರೀಡೆಯಲ್ಲಿ ತೊಡಗುವಂತೆ ಮಕ್ಕಳ ಮೇಲೆ ಒತ್ತಡ ಹೇರಬಾರದು. ಒಂದು ವೇಳೆ ಒತ್ತಡ ಹೇರಿದರೆ ಮಕ್ಕಳ ಕ್ರೀಡಾ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಎನ್.ಉಷಾರಾಣಿ ಹೇಳಿದರು.
ಮಹದೇವಪುರ ಕ್ಷೇತ್ರದ ಭೈರತಿ ಸಮೀಪದ ಗೆದ್ದಲಹಳ್ಳಿಯಲ್ಲಿ ನ್ಯೂ ಬಾಲ್ಡ್ವಿನ್ ಶಾಲೆಯ 15ನೇ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಆಸಕ್ತಿ ಇರುವ ಕ್ರೀಡೆಯಲ್ಲಿ ತೊಡಗುವಂತೆ ಪ್ರೋತ್ಸಾಹಿಸಬೇಕು. ಆಗಲೇ ಅವರು ಕ್ರೀಡೆಯಲ್ಲಿ ದೊಡ್ಡಮಟ್ಟದಲ್ಲಿ ಸಾಧನೆ ಮಾಡುವರು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ಆಂಜಿನಪ್ಪ ಮಾತನಾಡಿ, ನ್ಯೂಬಾಲ್ಡ್ವಿನ್ ಶಾಲೆಯ ಮಕ್ಕಳು ಪ್ರತಿವರ್ಷವೂ ಜಿಲ್ಲಾ ಹಾಗೂ ರಾಜ್ಯಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಪಡೆಯುತ್ತಲೇ ಇದ್ದಾರೆ. ಇದೊಂದು ಹೆಮ್ಮೆಯ ವಿಷಯ ಎಂದರು.