ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಬಿಡೆಂಟ್, ಇಂಜಾಸ್, ಮಂಜಾರಿಯಾ ಹಾಗೂ ಇತರ ಸಂಸ್ಥೆಗಳ ವಿರುದ್ಧ ದಾಖಲಾಗಿರುವ 21 ಪ್ರಕರಣಗಳಲ್ಲಿ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಹಾಗೂ ಜಗದೀಶ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡಲಾಗಿದೆ.
ಇವರು ವಿಚಾರಣಾ ನ್ಯಾಯಾಲಯಗಳಲ್ಲಿ ಸಿಸಿಬಿ ಪರ ವಾದ ಮಂಡಿಸಲಿದ್ದಾರೆ. ಈ ಕುರಿತಂತೆ ಗೃಹ ಇಲಾಖೆ ಸೋಮವಾರ ಆದೇಶಿಸಿದೆ.