‘ಕಳ್ಳತನ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳನ್ನು ಸಿಬ್ಬಂದಿ, ಜೀವದ ಹಂಗು ತೊರೆದು ಬೆನ್ನಟ್ಟಿ ಹಿಡಿದಿದ್ದಾರೆ. ಅವರೆಲ್ಲರ ಕೆಲಸ ಮೆಚ್ಚುವಂಥದ್ದು. ಅವರನ್ನು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹಿಸಿಸುವುದು ನಮ್ಮೆಲ್ಲರ ಕರ್ತವ್ಯ. ಸನ್ಮಾನಿತ 30 ಸಿಬ್ಬಂದಿಗೂ ನಾಲ್ಕು ದಿನಗಳ ರಜೆ ಸಹಿತ ಪ್ರವಾಸ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ’ ಎಂದು ಅಬ್ದುಲ್ ಅಹದ್ ಹೇಳಿದರು.