ಈ ವೇಳೆ ಜನವಾದಿ ಮಹಿಳಾ ಸಂಘಟನೆಯ ಉಪಾದ್ಯಕ್ಷೆ ಗೌರಮ್ಮ, ಸಿಪಿಐಎಂ ಮುಖಂಡ ಗೋಪಾಲಗೌಡ ಅವರಿಗೆ ಸಾಥ್ ನೀಡಿದರು. ಈ ಸಂದರ್ಭ ಮಾತನಾಡಿದ ಗೌರಮ್ಮ, ‘ನಮ್ಮ ರಾಜ್ಯದ ಜನರು ಬೇರೆ ರಾಜ್ಯಗಳಲ್ಲಿ ನೆಲೆಸಿರುವಂತೆ ಇವರು ಸಹ ಉದ್ಯೋಗ ಅರಸಿ ಬಂದು ಇಲ್ಲಿ ನೆಲೆಸಿದ್ದಾರೆ. ಇವರು ನೆಲೆಸಿರುವ ಜಾಗಕ್ಕೆ ಬಾಡಿಗೆಯನ್ನೂ ನೀಡಿದ್ದಾರೆ. ಇವರನ್ನು ಒಕ್ಕಲೆಬ್ಬಿಸಿ ಜಾಗ ಖಾಲಿ ಮಾಡಿಸುವುದರ ಹಿಂದೆ ಕೆಲ ಭೂ ಮಾಫಿಯಾದವರ ಕೈವಾಡ ಇದೆ’ ಎಂದು ಆರೋಪಿಸಿದರು.