ಶಿವಮೊಗ್ಗ:ಅರಣ್ಯ ಒತ್ತುವರಿ ತೆರವಿಗೆ ಮುಂದಾಗಿದ್ದ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗೆ ಪ್ರಾಣ ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಂಸದ ರಾಘವೇಂದ್ರ, ಸಾಗರ ಶಾಸಕ ಎಚ್. ಹಾಲಪ್ಪ ಹರತಾಳು, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಬಿ. ಸ್ವಾಮಿರಾವ್ ಸೇರಿ 30ಕ್ಕೂ ಹೆಚ್ಚು ಜನರ ವಿರುದ್ಧ ರಿಪ್ಪನ್ಪೇಟೆ ವಲಯ ಅರಣ್ಯಾಧಿಕಾರಿ ಜಿ. ಹನುಮಂತಯ್ಯ ರಿಪ್ಪನ್ಪೇಟೆ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.