ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಗಳ ಮೂಲಸೌಕರ್ಯಕ್ಕೆ ಆದ್ಯತೆ: ಶಾಸಕ ಎಸ್.ಟಿ.ಸೋಮಶೇಖರ್

Last Updated 1 ಡಿಸೆಂಬರ್ 2019, 11:08 IST
ಅಕ್ಷರ ಗಾತ್ರ

ಬೆಂಗಳೂರು: ‘ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದು ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.

ಚನ್ನೇನಹಳ್ಳಿ ಗ್ರಾಮ ಪಂಚಾಯಿತಿಯ ಕುರುಬರಹಳ್ಳಿಗುಡ್ಡದ ಬಸವಣ್ಣ ಮತ್ತು ಬಸವೇಶ್ವರ ಬಡಾವಣೆಯಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಪ್ರತಿ ಗ್ರಾಮದಲ್ಲೂ ಡಾಂಬರಿಕೃತ ರಸ್ತೆ, ಸಮರ್ಪಕ ಒಳಚರಂಡಿ, ಶುದ್ಧ ನೀರಿನ ಘಟಕ ನಿರ್ಮಾಣ ಮಾಡಲು ಯೋಜನೆ ರೂಪಿಸಿ, ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಗ್ಗಲಿಪುರ ಶಂಕರ ಮಠದ ವೃದ್ಧಾಶ್ರಮದಿಂದ ಗೋಶಾಲೆ ಸಂಪರ್ಕಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT