‘ಈ ಯೋಜನೆಯ ಸೌಲಭ್ಯಕ್ಕಾಗಿ ರಾಜ್ಯದಲ್ಲಿ 8,54,000 ಅರ್ಜಿಗಳು ಸಲ್ಲಿಕೆಯಾಗಿದ್ದವು. ಅದರಲ್ಲಿನ 2,08,000 ಅರ್ಜಿಗಳ ಮಾಹಿತಿಯನ್ನು ಯೋಜನೆಯ ತಂತ್ರಾಂಶಕ್ಕೆ ಬುಧವಾರ ಬೆಳಿಗ್ಗೆ ಹೊತ್ತಿಗೆ(ಮಾರ್ಚ್ 7) ಅಪ್ಲೋಡ್ ಮಾಡಿದ್ದೆವು. ಆದರೆ ಕೇಂದ್ರ ಸರ್ಕಾರ ಅದರಲ್ಲಿ ಕೇವಲ 17 ಫಲಾನುಭವಿಗಳನ್ನು ಆಯ್ಕೆ ಮಾಡಿದೆ. ಅದರಲ್ಲಿಯೂ 6 ರೈತರ ಖಾತೆಗೆ ಮಾತ್ರ ಹಣ ಜಮಾ ಮಾಡಿದೆ. ಅದರಲ್ಲಿ ಒಬ್ಬರ ಖಾತೆಗೆ ₹950 ಬಂದಿದೆ’ ಎಂದು ಕುಟುಕಿದರು.