ಬೆಂಗಳೂರು:ಕಲಾಬಂಧು ಫೌಂಡೇಷನ್ ಇದೇ 20ರಂದು ಗಾಂಧಿ ಭವನದಲ್ಲಿ ಸ್ವಾತಂತ್ರ್ಯಹೋರಾಟಗಾರ ಡಾ.ಎಚ್.ಎಸ್.ದೊರೆಸ್ವಾಮಿ ಅವರ ಕುರಿತಾದ ‘ಹೋರಾಟದ ದೊರೆ’ ಎನ್ನುವ ಸಾಕ್ಷ್ಯಚಿತ್ರ ಸಿ.ಡಿ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿದೆ.
ಸಂಸದ ವಿ.ಎಸ್.ಉಗ್ರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಎ.ಟಿ ರಾಮಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದುಕಲಾಬಂಧು ಫೌಂಡೇಷನ್ನ ಅಧ್ಯಕ್ಷ ಎಚ್.ನರಸಿಂಹರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಸಿ.ಡಿ ಬಿಡುಗಡೆಯ ಬಳಿಕವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆಕಲಾ ಬಂಧು ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ’ ಎಂದರು.