ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Last Updated 3 ಫೆಬ್ರುವರಿ 2019, 19:48 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ದಿಚಕ್ಕಿನಹಳ್ಳಿ ಗ್ರಾಮದ ಸಮೀಪ 2016ರ ಸೆಪ್ಟೆಂಬರ್ ನಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ವಿಜಯಕುಮಾರ್, ಲಕ್ಷ್ಮೀನರಸಿಂಹ ಎಂಬುವವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ನಗರದ 4ನೇ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಶುಕ್ಲಾಕ್ಷಪಾಲನ್ ಆದೇಶ ನೀಡಿದ್ದಾರೆ.

ಕೊಲೆಯಾದ ಬೆಂಗಳೂರು ಉತ್ತರ ತಾಲ್ಲೂಕಿನ ಲಕ್ಕೇನಹಳ್ಳಿಯ ನಿವಾಸಿ ಚಾಂದ್ ಪಾಷ ಪತ್ನಿಗೆ ₹15 ಸಾವಿರ ಪರಿಹಾರ ನೀಡಲು ಸೂಚಿಸಲಾಗಿದೆ. ಆರೋಪಿಗಳಿಗೆ ₹10 ಸಾವಿರ ದಂಡ ವಿಧಿಸಿದ್ದಾರೆ. ಪ್ರಕರಣವನ್ನು ಆಗ ಸರ್ಕಲ್ ಇನ್‌ಸ್ಪೆಕ್ಟರ್ ಆಗಿದ್ದ ಶಿವಕುಮಾರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕ ಎಂ.ಎಚ್.ಛಬ್ಬಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT