ಎಚ್.ಡಿ.ಕುಮಾರಸ್ವಾಮಿ, ‘ತುಮಕೂರಿನಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ 519 ಎಕರೆಯನ್ನು ಮೀಸಲಿಟ್ಟಿದ್ದು, ಇಲ್ಲಿ ತಲೆ ಎತ್ತಲಿರುವ ಈ ಕೈಗಾರಿಕಾ ನಗರ ಚೆನ್ನೈ -ಬೆಂಗಳೂರು ಕೈಗಾರಿಕಾ ಕಾರಿಡಾರಿನ ಪ್ರಮುಖ ಭಾಗವಾಗಲಿದೆ. ಇಲ್ಲಿ ಭಾರಿ ಎಂಜಿನಿಯರಿಂಗ್ ಮತ್ತು ಯಂತ್ರೋಪಕರಣಗಳು, ಆಟೋಮೇಟಿವ್ ಮತ್ತು ಆಟೋ ಬಿಡಿಭಾಗಗಳು ಹಾಗೂ ಏರೋಸ್ಪೇಸ್ ಬಿಡಿಭಾಗಗಳನ್ನು ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಕೈಗಾರಿಕಾ ಪ್ರದೇಶದಲ್ಲಿ ಮೂಲಸೌಕರ್ಯಗಳಾದ ಕಾಂಕ್ರೀಟ್ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ನೀರು ಸಂಸ್ಕರಣಾ ಘಟಕ, ವಿದ್ಯುತ್ ಉಪಕೇಂದ್ರ ಸ್ಥಾಪನೆ, ನೀರು ಸರಬರಾಜು ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದರು.