ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವಿತಾ ಸಮಾಜಕ್ಕೆ ₹ 100 ಕೋಟಿ ಕೊಡಿ: ಎಂ.ಸಿ. ವೇಣುಗೋಪಾಲ್‌

Last Updated 5 ಫೆಬ್ರುವರಿ 2019, 19:42 IST
ಅಕ್ಷರ ಗಾತ್ರ

ಬೆಂಗಳೂರು: ‘ಸವಿತಾ ಸಮಾಜದ ಅಭಿವೃದ್ಧಿಗೆ ₹100 ಕೋಟಿ ಮೀಸಲಿಡಬೇಕು ಮತ್ತು ಪ್ರತ್ಯೇಕ ನಿಗಮ ಸ್ಥಾಪಿಸಬೇಕು’ ಎಂದು ರಾಜ್ಯ ಸವಿತಾ ಸಮಾಜದ ಪದಾಧಿಕಾರಿಯೂ ಆದ ವಿಧಾನ ಪರಿಷತ್‌ ಸದಸ್ಯ ಎಂ.ಸಿ. ವೇಣುಗೋಪಾಲ್‌ ಆಗ್ರಹಿಸಿದ್ದಾರೆ.

ವೇಣುಗೋಪಾಲ್‌ ಅವರ ಬೇಡಿಕೆಗೆ ಪೂರಕವಾಗಿ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಹಿಂದುಳಿದಿರುವ ಸವಿತಾ ಸಮಾಜವನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಬಜೆಟ್‌ನಲ್ಲಿ ನಿಗಮ ಸ್ಥಾಪನೆ ಘೋಷಿಸುವಂತೆ ಮನವಿ ಮಾಡಿದ್ದಾರೆ.

ಕ್ಷೌರಿಕ ವೃತ್ತಿ ಮಾಡುವವರನ್ನೂ ಕಾರ್ಮಿಕರೆಂದು ಪರಿಗಣಿಸಿ ಭವಿಷ್ಯ ನಿಧಿ ಯೋಜನೆ ವಿಸ್ತರಿಸಬೇಕು, ಸಮಾಜದ ಮಹಿಳೆಯರಿಗೆ ಬ್ಯೂಟಿಷನ್‌ ಕೋರ್ಸ್‌ ಮಾಡಲು ತರಬೇತಿ ಶಾಲೆ ಆರಂಭಿಸಬೇಕು, ಸಮುದಾಯ ಭವನ ನಿರ್ಮಿಸಲು ಜಾಗ ನೀಡಬೇಕು ಮತ್ತಿತರ ಬೇಡಿಕೆಗಳನ್ನೂ ರಾಜ್ಯ ಸವಿತಾ ಸಮಾಜ ಮುಂದಿಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT