ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿ ಹರಿದು ಚಾಲಕ ಸಾವು

Last Updated 9 ಫೆಬ್ರುವರಿ 2019, 19:33 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಆರ್.ಪುರದ ಗ್ರಾಫೈಟ್ ಇಂಡಿಯಾ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಲಾರಿ ಹರಿದು ಮಹಮದ್ ಶಬೀರ್ (27) ಎಂಬುವರು ಮೃತಪಟ್ಟಿದ್ದಾರೆ.

ಲಾರಿ ಚಾಲಕರಾದ ಮಹಾರಾಷ್ಟ್ರದ ಶಬೀರ್, ರಾತ್ರಿ 9 ಗಂಟೆ ಸುಮಾರಿಗೆ ‘ಏಷಿಯನ್ ಪೇಯಿಂಟ್ಸ್’ ಕಂಪನಿ ಗೋದಾಮಿಗೆ ಸರಕು ತಂದಿದ್ದರು. ಅದನ್ನು ಅನ್‌ಲೋಡ್ ಮಾಡುತ್ತಿದ್ದಾಗ ಕಂಪನಿಯ ಇನ್ನೊಂದು ಲಾರಿ ಅಲ್ಲಿಗೆ ಬಂದಿದೆ. ಅದರ ಚಾಲಕ ಲಾರಿಯನ್ನು ಗೋದಾಮಿನ ಪಕ್ಕಕ್ಕೆ ನಿಲ್ಲಿಸುವ ಸಲುವಾಗಿ ಹಿಮ್ಮುಖವಾಗಿ ಚಾಲನೆ ಮಾಡಿದ್ದಾನೆ. ಈ ವೇಳೆ ಶಬೀರ್‌ ಅವರಿಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದಾಗ ಚಕ್ರ ಮೈಮೇಲೆ ಹರಿದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದು ಲಾರಿ ಜಪ್ತಿ ಮಾಡಲಾಗಿದೆ ಎಂದು ಕೆ.ಆರ್.ಪುರ ಸಂಚಾರ ‍ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT