ಅದರಮುನ್ನಾದಿನವಾದ ಸೋಮವಾರ ಅಗ್ನಿಕೊಂಡ,ಉಯ್ಯಾಲೋತ್ಸವ ಮತ್ತುದೀಪಾರಾಧನೆ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 12ಕ್ಕೆ ನೂತನ ರಥಕ್ಕೆ ಕನಕಪುರ ದೇಗುಲ ಮಠದ ಚನ್ನಬಸವಸ್ವಾಮೀಜಿ ಪೂಜೆ ನೆರವೇರಿಸಲಿದ್ದಾರೆ. ಬಳಿಕರುದ್ರಾಭಿಷೇಕ, ಹೋಮ ಮತ್ತು ರಥೋತ್ಸವ ಜರುಗಲಿದೆ. ಸಭಾ ಕಾರ್ಯಕ್ರಮದಲ್ಲಿಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಗುತ್ತದೆ.ಸಂಸದವೀರಪ್ಪ ಮೊಯ್ಲಿ, ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಶಾಸಕ ಟಿ.ವೆಂಕಟರಮಣಯ್ಯ, ಶಾಸಕ ಎಂ.ವಿ. ವೀರಭದ್ರಯ್ಯ, ವಿಧಾನಪರಿಷತ್ ಸದಸ್ಯ ರವಿ ಭಾಗವಹಿಸಲಿದ್ದಾರೆ.