ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಮಾತನಾಡಿ, ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ, ದೇಶವನ್ನು ಪ್ರಗತಿ ಪಥದಲ್ಲಿ ಮುಂದುವರಿಸುವಲ್ಲಿ ಪ್ರಧಾನಿ ಮೋದಿ ಅವರು ಹೊಸ ಹಾದಿ ಹಾಕಿಕೊಟ್ಟಿದ್ದಾರೆ. ಐದು ವರ್ಷಗಳಿಂದ ಕೈಗೊಂಡಿರುವ ಪ್ರಗತಿಪರ ಯೋಜನೆಗಳು ಮುಂದುವರಿಯಬೇಕಾದರೆ ದೇಶದ ಜನರು ಕೈಜೋಡಿಸಬೇಕಾಗಿದೆ ಎಂದು ಹೇಳಿದರು.