ಅರಕಲಗೂಡು ತಾಲ್ಲೂಕು ಹೊನ್ನವಳ್ಳಿಯ ರಮೇಶ್, ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ 2013ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಎ.ಮಂಜು ಎದುರು ರಾಜಕೀಯವಾಗಿ ಸೆಣಸಾಡುತ್ತಲೇ ಬಂದಿದ್ದು, ಮಂಜು ಬಿಜೆಪಿಯಲ್ಲಿ ಇರುವವರೆಗೂ ತಮಗೆ ಭವಿಷ್ಯವಿಲ್ಲ ಎಂದುಕೊಂಡು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎನ್ನಲಾಗಿದೆ.