ರುವಾರ ರಾತ್ರಿ ಜಿಲ್ಲೆಯ ಕೆಲವೆಡೆ ರಭಸದ ಗಾಳಿ ಬೀಸಿದ್ದರಿಂದ ಮತ್ತು ಆಲಿಕಲ್ಲು ಮಳೆಯಿಂದ ಮಾವಿನ ಕಾಯಿಗಳು ಉದುರಿವೆ. ಬಲಿತು, ಕಟಾವು ಹಂತಕ್ಕೆ ಬಂದಿದ್ದ ಕಾಯಿಗಳು ಉದುರಿದ್ದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಗದಗ ತಾಲ್ಲೂಕಿನ ಹುಲಕೋಟಿ, ಹೊಸಳ್ಳಿ, ದುಂದೂರು ಗ್ರಾಮಗಳಲ್ಲಿ ಆಲಿಕಲ್ಲು ಮಳೆಯಿಂದ ಮಾವಿನ ಕಾಯಿಗಳು ಹಾನಿಗೀಡಾಗಿವೆ.ಜಿಲ್ಲೆಯಲ್ಲಿ 1247 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದ್ದು, ಇದರಲ್ಲಿ ಹುಲಕೋಟಿ ಭಾಗವೇ ಸಿಂಹಪಾಲು ಹೊಂದಿದೆ.