ಇಲ್ಲಿನ ರೋಟರಿ ಸರ್ಕಲ್ ಹತ್ತಿರದ ವಿಸ್ಟಾ ಹೊಟೇಲ್ ಹಿಂಬಾಗದ 20 ಎಕರೆ ಜಮೀನಿನಲ್ಲಿಪ್ರಚಾರ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಹೆಲಿಪ್ಯಾಡ್ ನಿರ್ಮಾಣ ಸೇರಿದಂತೆ ಸಾರ್ವಜನಿಕರ, ಗಣ್ಯರ ಸ್ಥಳಾವಕಾಶದ ಕುರಿತು ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ, ಶಾಸಕ ಗೋವಿಂದ ಕಾರಜೋಳ ಕಾರ್ಯಕ್ರಮದ ರೂಪುರೇಷೆ ಕುರಿತು ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಚರ್ಚೆ ನಡೆಸಿದರು.