ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

32 ರೈತರ ಮೇಲೆ ಸುಳ್ಳು ಕೇಸ್‌ ದಾಖಲಿಸಿರುವುದನ್ನು ಖಂಡಿಸಿ ಪ್ರತಿಭಟನೆ

Last Updated 4 ಮೇ 2019, 14:50 IST
ಅಕ್ಷರ ಗಾತ್ರ

ಹಾವೇರಿ: 32 ಜನ ರೈತರ ಮೇಲೆ ಜಿಲ್ಲಾಡಳಿತದಿಂದ ಸುಳ್ಳು ಕೇಸ್‌ ದಾಖಲಿಸಿರುವುದನ್ನು ಖಂಡಿಸಿ, ಮೊಕದ್ದಮೆ ವಾಪಸ್ಸು ಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕುಘಟಕದಿಂದ ತಹಶೀಲ್ದಾರ್‌ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ರೈತ ಮುಖಂಡ ಮಂಜುನಾಥ ಕದಂ ಮಾತನಾಡಿ, 32 ವರ್ಷಗಳಿಂದ ಸಂಘಟನೆಯು ರೈತರ ಪರವಾಗಿ ಹೋರಾಟಗಳನ್ನುಮಾಡುತ್ತ ನ್ಯಾಯವನ್ನು ಒದಗಿಸಿದೆ. ಹಿಂದಿನ ಜಿಲ್ಲಾಧಿಕಾರಿ ಇಲ್ಲಸಲ್ಲದ ಆರೋಪಗಳನ್ನು ಮಾಡಿ 32 ರೈತರ ಮೇಲೆ ಸುಳ್ಳು ಮೊಕದ್ದಮೆ ಹಾಕಿ ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ ಎಂದು ಅವರು ಆರೋಪಿಸಿದರು.

ರೈತರು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು 2018ರ ಜುಲೈ 16ರಂದು ಪ್ರತಿಭಟನೆ ನಡೆಸಲಾಗಿತ್ತು. ಹಿಂದಿನ ಜಿಲ್ಲಾಧಿಕಾರಿ ರೈತರ ಮೇಲೆ ಸುಳ್ಳು ಕೇಸ್‌ ದಾಖಲಿಸಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಎಂದು ಆರೋಪಿಸಿದರು.

ರೈತರ ಪರವಾಗಿ ಮಾತನಾಡುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜಿಲ್ಲೆಯ ರೈತರ ಮೇಲಿನ ಮೊಕದ್ದಮೆ ವಾಪಸು ಪಡೆಯುವಂತೆ ಆಗ್ರಹಿಸಿದರು.

ರೈತ ಮುಖಂಡರಾದ ಸುರೇಶ ಚಲುವಾದಿ, ಹೇಮಣ್ಣ ಕೋಡಿಹಳ್ಳಿ, ಶಿವಬಸಪ್ಪ ಗೋವಿ, ಶಾರಕ್ಕ ಹಿರೇಮಠ, ಸುಮಂಗಲಾ ಇಪ್ಪಿಕೊಪ್ಪ, ನಾಗಪ್ಪ ಬೂದಿಹಾಳ, ಗದಿಗೆಪ್ಪ ಮರಳಿಹಳ್ಳಿ, ಚಂದ್ರಪ್ಪ ನವಲಿ, ನಾಗಪ್ಪ ವಾಲಿಕಾರ, ಅಜ್ಜಪ್ಪ ಕಾಳಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT