‘ಅಪರೂಪದ ಸಾಮಾಜಿಕ ಕಳಕಳಿ ಹೊಂದಿರುವ ದಕ್ಷ ಪೊಲೀಸ್ ಅಧಿಕಾರಿ ಶ್ರುತಿ ಅವರು, ದೇಶದ ಸನಾತನ ಪರಂಪರೆಯಂತೆ ಎಲ್ಲಾ ಪ್ರಾಣಿಗಳಲ್ಲಿಯೂ ದೇವರನ್ನು ಕಾಣುವ ಮಹೋನ್ನತ ಆದರ್ಶ ಹೊಂದಿದ್ದಾರೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಅಧಿಕಾರಿಗಳು, ರಾಜಕಾರಣಿಗಳು ಎಂಬುದಾಗಿ ಭೇದಭಾವ ಇರಬಾರದು. ದೇಶದ ಋಣ ತೀರಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದ್ದು, ಸಾಮಾಜಿಕ ಕಾರ್ಯಗಳು ಎಲ್ಲೇ ನಡೆದರೂ ಅದನ್ನು ಬೆಂಬಲಿಸುವ ಪ್ರವೃತ್ತಿಯನ್ನು ಎಲ್ಲರೂ ಬೆಳೆಸಿಕೊಳ್ಳಬೇಕು’
ಎಂದರು.