ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಮತ್ತು ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಚುನಾವಣೆ ನಡೆಯುವ ಸ್ಥಳಗಳಲ್ಲಿ ಈಗಾಗಲೇ ಮದ್ಯಪಾನ ಹಾಗೂ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಮೇ 31ರ ಮಧ್ಯರಾತ್ರಿ 12ರ ವರೆಗೆ ಈ ತಡೆ ಮುಂದುವರಿಯಲಿದೆ ಎಂದುಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.