<p><strong>ಬೆಂಗಳೂರು:</strong> ‘ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧರಿಸಿ ಅನರ್ಹರಿಗೆ ಬೆಂಬಲ ನೀಡಬಾರದು’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದರು.</p>.<p>ನಗರದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಅಯೋಜಿಸಿದ್ದ ‘ಔದ್ಯೋಗಿಕ ಕೌಶಲಾಧಾರಿತ ಕಲಿಕೆಯಾಗಿ ಪದವಿ ಶಿಕ್ಷಣ’ ಕಾರ್ಯಾಗಾರ ಉದ್ಘಾಟಿಸಿ, ‘ಸ್ವಜಾತಿಯವರು ಎಂಬ ಕಾರಣಕ್ಕೆ ಅನರ್ಹರಿಗೆ ಆದ್ಯತೆ ನೀಡಿದರೆ ವಿಶ್ವವಿದ್ಯಾಲಯಕ್ಕೆ ಕಪ್ಪುಚುಕ್ಕೆ ಬಂದಂತೆ ಆಗಲಿದೆ’ ಎಂದರು.</p>.<p>‘ಮುಂದಿನ ಪ್ರಜೆಗಳನ್ನು ಸೃಷ್ಟಿಸುವ ಪವಿತ್ರ ಹುದ್ದೆಯಲ್ಲಿ ಇರುವವರು ಭ್ರಷ್ಟಾಚಾರ ರಹಿತವಾಗಿ ಮತ್ತು ಜಾತ್ಯತೀತವಾಗಿ ನಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಸರ್ಕಾರಿ ವಿಶ್ವವಿದ್ಯಾಲಯಗಳು,ಖಾಸಗಿ ವಿಶ್ವವಿದ್ಯಾಲಯಗಳಿಗಿಂತ ಕಡಿಮೆ ಇಲ್ಲ. ದೊಡ್ಡ ದೊಡ್ಡ ಉದ್ಯಮಿಗಳನ್ನು ಆಹ್ವಾನಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ಕೊಡಿಸಬೇಕು. ಈ ರೀತಿಯ ಕೆಲಸಗಳು ಸರ್ಕಾರಿ ಕಾಲೇಜುಗಳಲ್ಲಿ ಆಗುತ್ತಿಲ್ಲ. ವಿಶ್ವವಿದ್ಯಾಲಯಗಳ ಮುಖ್ಯಸ್ಥರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧರಿಸಿ ಅನರ್ಹರಿಗೆ ಬೆಂಬಲ ನೀಡಬಾರದು’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದರು.</p>.<p>ನಗರದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಅಯೋಜಿಸಿದ್ದ ‘ಔದ್ಯೋಗಿಕ ಕೌಶಲಾಧಾರಿತ ಕಲಿಕೆಯಾಗಿ ಪದವಿ ಶಿಕ್ಷಣ’ ಕಾರ್ಯಾಗಾರ ಉದ್ಘಾಟಿಸಿ, ‘ಸ್ವಜಾತಿಯವರು ಎಂಬ ಕಾರಣಕ್ಕೆ ಅನರ್ಹರಿಗೆ ಆದ್ಯತೆ ನೀಡಿದರೆ ವಿಶ್ವವಿದ್ಯಾಲಯಕ್ಕೆ ಕಪ್ಪುಚುಕ್ಕೆ ಬಂದಂತೆ ಆಗಲಿದೆ’ ಎಂದರು.</p>.<p>‘ಮುಂದಿನ ಪ್ರಜೆಗಳನ್ನು ಸೃಷ್ಟಿಸುವ ಪವಿತ್ರ ಹುದ್ದೆಯಲ್ಲಿ ಇರುವವರು ಭ್ರಷ್ಟಾಚಾರ ರಹಿತವಾಗಿ ಮತ್ತು ಜಾತ್ಯತೀತವಾಗಿ ನಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>‘ಸರ್ಕಾರಿ ವಿಶ್ವವಿದ್ಯಾಲಯಗಳು,ಖಾಸಗಿ ವಿಶ್ವವಿದ್ಯಾಲಯಗಳಿಗಿಂತ ಕಡಿಮೆ ಇಲ್ಲ. ದೊಡ್ಡ ದೊಡ್ಡ ಉದ್ಯಮಿಗಳನ್ನು ಆಹ್ವಾನಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ಕೊಡಿಸಬೇಕು. ಈ ರೀತಿಯ ಕೆಲಸಗಳು ಸರ್ಕಾರಿ ಕಾಲೇಜುಗಳಲ್ಲಿ ಆಗುತ್ತಿಲ್ಲ. ವಿಶ್ವವಿದ್ಯಾಲಯಗಳ ಮುಖ್ಯಸ್ಥರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>