ಬೆಂಗಳೂರು, ಸೆ. 7– ವಿರೋಧ ಪಕ್ಷಗಳ ಪ್ರತಿಭಟನೆ, ಸಭಾತ್ಯಾಗದ ನಡುವೆ ಬಹಮತದ ಮೂಲಕ ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದ ಪರಿಶಿಷ್ಟ ಜಾತಿ, ಬುಡಕಟ್ಟು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಹಾಗೂ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿಯನ್ನು ಶೇ. 80ಕ್ಕೆ ಏರಿಸುವ ಮಸೂದೆಗೆ ಅಂಗೀಕಾರ ಪಡೆಯಲು ಮುಂದಾಗದೆ ಸರ್ಕಾರ ಕೊನೆಗಳಿಗೆಯಲ್ಲಿ ಹಿಂದೆ ಸರಿಯಿತು. ರಾಜಕೀಯ ದುರುದ್ದೇಶದಿಂದ ಈ ಮಸೂದೆ ತರಲಾಗುತ್ತಿದೆ ಎಂದು ಸದಸ್ಯರು ಆಪಾದಿಸಿದರು.